Advertisement

“ಮನೆ ಮನೆಗೆ ಗಂಗೆ’ 2024ಕ್ಕೆ ಪೂರ್ಣಗೊಳಿಸಲು ಗುರಿ

11:31 PM Jan 05, 2022 | Team Udayavani |

ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಜಲ ಜೀವನ್‌ಮಿಷನ್‌ ಯೋಜನೆ ಯಡಿ ರಾಜ್ಯ ಸರಕಾರ ಅನುಷ್ಠಾನ ಗೊಳಿಸುತ್ತಿರುವ “ಮನೆ ಮನೆಗೆ ಗಂಗೆ’ಯಡಿ ಮುಂದಿನ ಎರಡು ವರ್ಷ 44.59 ಲಕ್ಷ ಮನೆಗಳಿಗೆ ಶುದ್ಧ ಕುಡಿಯುವ ನೀರು ನಲ್ಲಿ ಸಂಪರ್ಕ ಮೂಲಕ ಪೂರೈಕೆಯಾಗಲಿದೆ.

Advertisement

ರಾಜ್ಯದ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೂ ಶುದ್ಧ ಕುಡಿಯುವ ನೀರು ಪೂರೈಸುವ ಗುರಿಯನ್ನು 2024 ರೊಳಗೆ ಪೂರೈಸುವ ನಿಟ್ಟಿನಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ.

2022-23ನೇ ಸಾಲಿನಲ್ಲಿ 27.14 ಲಕ್ಷ ಹಾಗೂ 2023-24ನೇ ಸಾಲಿನಲ್ಲಿ 17.45 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಮೂಲಕ ಕುಡಿಯುವ ನೀರು ಪೂರೈಸಲು ತೀರ್ಮಾ ನಿಸಲಾಗಿದೆ.

ಇದರೊಂದಿಗೆ 2024ರ ಆರ್ಥಿಕ ವರ್ಷದ ಅಂತ್ಯ ದೊಳಗೆ ರಾಜ್ಯದ ಗ್ರಾಮೀಣ ಭಾಗದ 97.91 ಲಕ್ಷ ಮನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಕುಡಿಯುವ ನೀರು ಲಭ್ಯವಾಗಲಿದೆ.

ಕೇಂದ್ರ ಸರಕಾರ 2019ರಲ್ಲಿ ಜಲಜೀವನ್‌ ಮಿಷನ್‌ ಯೋಜನೆ ರೂಪಿಸಿ ರಾಜ್ಯ ಸರಕಾರ ಅದಕ್ಕೆ “ಮನೆ ಮನೆಗೆ ಗಂಗೆ’ ಎಂದು ಹೆಸರಿಟ್ಟು 2025ರೊಳಗೆ ಗ್ರಾಮೀಣ ಭಾಗದ ಮನೆಗಳಿಗೆ ನೀರು ಪೂರೈಕೆ ಗುರಿ ಹಾಕಿಕೊಳ್ಳಲಾಗಿತ್ತು. ಈಗ ಅದನ್ನು 2024ರೊಳಗೇ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.

Advertisement

ಇದನ್ನೂ ಓದಿ:ಜಾಬ್ರಾ ಎಲೈಟ್‌ 4 ಆ್ಯಕ್ಟಿವ್‌ ಬಿಡುಗಡೆ; 7 ಗಂಟೆ ಬ್ಯಾಟರಿ ಲೈಫ್ ಇರುವ ಇಯರ್‌ಬಡ್‌

ಒಟ್ಟಾರೆ ಯೋಜನೆಗೆ 8,196 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಿ ಕೇಂದ್ರ ಸರಕಾರದಿಂದ ಅನುಮೋದನೆ ಯನ್ನೂ ಪಡೆಯ ಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿ ದ್ದಾರೆ.

2021 – 22ನೇ ಸಾಲಿನಲ್ಲಿ 25.17 ಲಕ್ಷ ಮನೆಗಳಿಗೆ ನೀರು ಪೂರೈಕೆ ಮಾಡಲು ರೂಪಿಸಲಾಗಿದ್ದ 120 ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಕೇಂದ್ರ ಸರಕಾರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡಿ ಯೋಜನೆ ಅನುಷ್ಠಾನಕ್ಕೆ ಮತ್ತಷ್ಟು ವೇಗ ಸಿಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಇತ್ತೀಚೆಗೆ ಪ್ರಗತಿ ಪರಿಶೀಲನ ಸಭೆಯಲ್ಲಿ ಅಧಿಕಾರಿಗಳಿಗೆ ಟಾರ್ಗೆಟ್‌ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶುದ್ಧತೆ ಪರೀಕ್ಷೆಗೆ ಪ್ರಯೋಗಾಲಯ
ಈ ಮಧ್ಯೆ, ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಸುರಕ್ಷಿತ ನೀರು ಒದಗಿಸುವ ನಿಟ್ಟಿನಲ್ಲಿ ಹಾಗೂ ಖಾತರಿಪಡಿಸಿಕೊಳ್ಳಲು ನೀರಿನ ಗುಣಮಟ್ಟ ಪರೀಕ್ಷೆ ನಡೆಸಲು ರಾಜ್ಯದ 31 ಜಿಲ್ಲೆಗಳಲ್ಲಿ 78 ಪ್ರಯೋಗಾಲಯ ಸ್ಥಾಪಿಸಲಾಗಿದ್ದು, ಆ ಪೈಕಿ 13 ಪ್ರಯೋಗಾಲಯಗಳಿಗೆ ಎನ್‌ಎಬಿಎಲ್‌ ಮಾನ್ಯತೆ ಪಡೆದು ನೀರಿನ ಗುಣಮಟ್ಟ ಪರೀಕ್ಷೆ ಕಾರ್ಯ ಆರಂಭಿಸಲಾಗಿದೆ.

ಸಹಾಯವಾಣಿ ಆರಂಭ
ಜತೆಗೆ, ಗ್ರಾಮೀಣ ಭಾಗದಲ್ಲಿ ನೀರು ಮತ್ತು ನೈರ್ಮಲ್ಯ ಕುರಿತ ಕುಂದುಕೊರತೆ ಪರಿಹರಿಸಲು, ಕಾಲ ಕಾಲಕ್ಕೆ ದೂರುಗಳಿಗೆ ಸ್ಪಂದಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಪರಿಹಾರ ಸಹಾಯವಾಣಿ- 9480985555 ಅನ್ನು ಸ್ಥಾಪಿಸಿದೆ. ಇದರಿಂದಾಗಿ ಯೋಜನೆ ಪರಿಣಾಮಕಾರಿ ಜಾರಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

“ಮನೆ ಮನೆಗೆ ಗಂಗೆ’ ಯೋಜನೆಯನ್ನು 2024ಕ್ಕೆ ಪೂರ್ಣಗೊಳಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ಮುಂದಿನ ಎರಡು ವರ್ಷಗಳ ಕ್ರಿಯಾ ಯೋಜನೆ ರೂಪಿಸಿ ಕೇಂದ್ರದಿಂದ ಅನುಮೋದನೆ ಪಡೆದುಕೊಳ್ಳಲಾಗಿದೆ. ರಾಜ್ಯದ ಪ್ರತಿ ಹಳ್ಳಿ ಮನೆಯಲ್ಲೂ ಶುದ್ಧ ಕುಡಿಯುವ ನೀರು ಪೂರೈಕೆಗೆ ನಮ್ಮ ಬದ್ಧತೆ.
-ಕೆ.ಎಸ್‌. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next