Advertisement

ನೆಮ್ಮದಿ ವಾತಾವರಣ ಸೃಷ್ಟಿಯೇ ಗುರಿ

12:32 PM May 08, 2018 | |

ಬೆಂಗಳೂರು: ಶಿವಾಜಿನಗರದ ಬಿಜೆಪಿ ಅಭ್ಯರ್ಥಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೋಮವಾರ ಅಲಸೂರು ವಾರ್ಡ್‌ನಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ನಡೆಸಿದರು. ಸಂಸದ ಪಿ.ಸಿ.ಮೋಹನ್‌ ಸೇರಿದಂತೆ ಪಕ್ಷದ ನಾಯಕರು ಹಾಗೂ ಮುಖಂಡರ ಜತೆ ಮನೆ ಮನೆಗೆ ತೆರಳಿದ ಅವರು ತಮಗೆ ಆಶೀರ್ವಾದ ನೀಡುವಂತೆ ಮನವಿ ಮಾಡಿದರು.

Advertisement

ಕ್ಷೇತ್ರದಲ್ಲಿ ಶಾಂತಿ ಸುವ್ಯವಸ್ಥೆ, ಎಲ್ಲ ಧರ್ಮದವರು ನೆಮ್ಮದಿಯಿಂದ ಜೀವನ ನಡೆಸುವ ವಾತಾವರಣ ನಿರ್ಮಾಣ ಮಾಡಲಾಗುವುದು. ಜನರ ಸಮಸ್ಯೆಗಳಿಗೆ ನಿರಂತರ ಸ್ಪಂದಿಸಲಾಗುವುದು ಎಂದು ಹೇಳಿದರು. ಈ ಹಿಂದೆ ಶಾಸಕನಾಗಿದ್ದಾಗ  ಆರೋಗ್ಯ ತಪಾಸಣೆ ಶಿಬಿರ, ಹಿರಿಯ ನಾಗರಿಕರಿಗೆ ಉಚಿತ ಕನ್ನಡಕ ವಿತರಣೆ ಸೇರಿದಂತೆ ಹಲವಾರು ಶಿಬಿರಗಳನ್ನು ಮಾಡಿದ್ದು,

ಕ್ಷೇತ್ರದಲ್ಲಿದ್ದ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ ಎಂದು ಹೇಳಿದರು. ಈ ಕ್ಷೇತ್ರದ ಶಾಸಕನಾಗಿ ಜನತೆಯ ಜತೆ ಉತ್ತಮ ಸಂಬಂಧ ಹೊಂದಿದ್ದು, ನಾನು  ಈ ಹಿಂದೆ ಮಾಡಿರುವ ಕೆಲಸಗಳು ನನಗೆ ಶ್ರೀರಕ್ಷೆಯಾಗಲಿದೆ ಎಂದು ತಿಳಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next