Advertisement

ಮಾದರಿ ಕ್ಷೇತ್ರ ಮಾಡುವುದೇ ಗುರಿ

10:48 AM May 10, 2018 | |

ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರವನ್ನು ಅಭಿವೃಧಿಯಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿಯಿಟ್ಟುಕೊಂಡಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಸಪ್ತಗಿರಿ ರಾಮಚಂದ್ರೇಗೌಡ ಹೇಳಿದರು. ಬುಧವಾರ ಕಾರ್ಯಕರ್ತರು ಹಾಗೂ ಬೆಂಬಲಿಗರ ಜತೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ಬೈಕ್‌ ರ್ಯಾಲಿ ಹಾಗೂ ಪಾದಯಾತ್ರೆ ನಡೆಸಿ ತಮ್ಮ ಪರ ಮತ ಚಲಾಯಿಸುವಂತೆ ಕೋರಿದರು. ಚಿಕ್ಕಪೇಟೆ, ಅಕ್ಕಿ ಪೇಟೆಯಂತಹ ಪ್ರದೇಶಗಳಲ್ಲಿ ಸರಿಯಾದ ರಸ್ತೆಯಿಲ್ಲದೆ ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ.

Advertisement

ಕೊಳಚೆ ಪ್ರದೇಶಗಳಲ್ಲಿ ಸರಿಯಾದ ಮೂಲ ಸೌಕರ್ಯಗಳ ಕೊರತೆಯಿದೆ. ಅಲ್ಲದೆ ಮೆಜೆಸ್ಟಿಕ್‌ ಪ್ರದೇಶದಲ್ಲಿ ಸ್ವಚ್ಚತೆ ಕಾಪಾಡುವುದು ಸವಾಲಾಗಿದ್ದು, ಸ್ವತ್ಛತೆ ಕಾಪಾಡುವ ಯೋಜನೆಗೆ ಪ್ರಮುಖ ಅದ್ಯತೆ ತಗೆದುಕೊಳ್ಳಲಿದ್ದೇನೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಕುಂಠಿತದಿಂದ ಹಿಂದುಳಿದಿದ್ದು, ತಾವು ಶಾಸಕನಾಗಿ ಆಯ್ಕೆಯಾದರೆ ಜನರ
ಇಚ್ಛೆಯಂತೆ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗುತ್ತೇನೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿ ಮಾದರಿ
ಕ್ಷೇತ್ರವನ್ನಾಗಿಸುವ ಗುರಿಯನ್ನು ಹೊಂದಿದ್ದೇನೆ ಎಂದರು.

ಸ್ವಾಮಿ ವಿವೇಕಾನಂದರ ತತ್ವ ಸಿಧಾಂತ ಹಾಗೂ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಆದರ್ಶಗಳಿಂದ ಪ್ರಭಾವಿತನಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ನನಗೆ ಪ್ರೇರಣಾ ಶಕ್ತಿಯಾಗಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next