Advertisement

Udupi: ಕೆಲಸಕ್ಕೆ ಸೇರಿದ ವ್ಯಕ್ತಿಯಿಂದ ಚಿನ್ನ ಕಳವು

08:31 PM Sep 21, 2024 | Team Udayavani |

ಉಡುಪಿ: ಚಿನ್ನದ ಕೆಲಸಕ್ಕೆ ಸೇರಿದ ವ್ಯಕ್ತಿಯೊಬ್ಬ ಚಿನ್ನವನ್ನು ಕದ್ದುಕೊಂಡು ಪರಾರಿಯಾದ ಘಟನೆ ನಡೆದಿದೆ.

Advertisement

ಚಿತ್ತರಂಜನ್‌ ಸರ್ಕಲ್‌ ಬಳಿ ಇರುವ ಚಿನ್ನದ ಅಂಗಡಿಯಲ್ಲಿ ಪಶ್ಚಿಮ ಬಂಗಾಲ ಮೂಲದ ಸೊಮೇನ್‌ ಡೋಲುಯಿ ಚಿನ್ನದ ಕುಸುರಿ ಕೆಲಸಕ್ಕೆ ಸೇರಿಸಿಕೊಂಡಿದ್ದ. ಸೆ.20ರಂದು ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಆತ ಕೆಲಸ ಮಾಡಿ ಊಟಕ್ಕೆ ತೆರಳಿದ್ದ. ಮಧ್ಯಾಹ್ನದ ಬಳಿಕ ಆತನಿಗೆ ಜುಮ್ಕಿಯ ಕೆಳಗೆ ಗುಂಡು ಅಳವಡಿಸಲು ಚಿನ್ನದ ಗಟ್ಟಿ ನೀಡಿ ಸಬೀರ್‌ ಅವರು ಊಟಕ್ಕೆ ತೆರಳಿದ್ದರು. ಸಂಜೆ 5ಕ್ಕೆ ಆತನಿಗೆ ಚಿನ್ನದ ಕೆಲಸದ ಬಗ್ಗೆ ವಿಚಾರಿಸಲು ಕರೆ ಮಾಡಿದಾಗ ಆತನ ಮೊಬೈಲ್‌ ಸ್ವಿಚ್‌ ಆಫ್ ಬರುತ್ತಿತ್ತು. ಕೂಡಲೇ ಅಂಗಡಿಗೆ ಬಂದು ನೋಡಿದಾಗ ಆತ ಅಂಗಡಿಯಲ್ಲಿ ಇರಲಿಲ್ಲ. ಆತ ಕೆಲಸ ಮಾಡುತ್ತಿದ್ದ ಡ್ರಾವರ್‌ ಪರಿಶೀಲಿಸಿದಾಗ ಆತನಿಗೆ ಚಿನ್ನದ ಕುಸುರಿ ಕೆಲಸಕ್ಕೆ ನೀಡಿದ್ದ 136.240 ಗ್ರಾಂ ತೂಕದ ಚಿನ್ನವನ್ನು ಕಳವು ಮಾಡಿಕೊಂಡು ಹೋಗಿದ್ದ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next