Advertisement

ಸರ್ಕಾರಕ್ಕೆ ಬಹುಮತ ಇಲ್ಲ,ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ – ರಾಮುಲು

10:01 AM Feb 06, 2019 | Team Udayavani |

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಸಮ್ಮಶ್ರ ಸರಕಾರಕ್ಕೆ ಬಹುಮತ ಇಲ್ಲ. ಇಂದು ಅಧಿವೇಶನಕ್ಕೆ ಆಡಳಿತ ಪಕ್ಷದ 15ಕ್ಕೂ ಹೆಚ್ಚು ಮಂದಿ ಶಾಸಕರು ಗೈರು ಹಾಜರಾಗಿದ್ದರು. ಹಾಗಾಗಿ ನಾವು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ.

Advertisement

ಬುಧವಾರ ವಿಧಾನ ಮಂಡಲ ಅಧಿವೇಶನ ನಂತರ ಮಾತನಾಡಿದ ರಾಮುಲು, ಸರ್ಕಾರಕ್ಕೆ ಸಂಖ್ಯಾಬಲವಿಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡಬೇಕು. ನಾವು ಹಂತ ಹಂತವಾಗಿ ಹೋರಾಟ ನಡೆಸುತ್ತೇವೆ. ಇದರ ಬಗ್ಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದರು. 

ಬಹುಮತ ಸಾಬೀತು ಮಾಡಲಿ: ಜಾರ್ಜ್


ಬಿಜೆಪಿ ಪ್ರತಿಭಟನೆ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ಜಾರ್ಜ್, ನಮ್ಮ ಸರ್ಕಾರ ಸುಭಧ್ರವಾಗಿದೆ. ನಾವು ಐದು ವರ್ಷಗಳ ಕಾಲ ಅಧಿಕಾರ ನಡೆಸುತ್ತೇವೆ. ಬಿಜೆಪಿಯವರು ಬಹುಮತ ಇಲ್ಲ ಎಂದು ಹೇಳುವುದು ಮಾತ್ರ. ಬೇಕಾದರೆ ಸಾಬೀತು ಮಾಡಲಿ ಎಂದರು. 

ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿಯವರು ರಾಜ್ಯಪಾಲರಿಗೆ ಮತ್ತು ಸಂವಿಧಾನಕ್ಕೆ ಅಗೌರವ ತೋರಿದ್ದಾರೆ ಎಂದು ಬಿಜೆಪಿಯ ನಡೆಯ ಕುರಿತು ಟೀಕೆ ಮಾಡಿದರು. 

Advertisement

Udayavani is now on Telegram. Click here to join our channel and stay updated with the latest news.

Next