Advertisement

ಸರಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ: ಡಿಕೆಶಿ

08:59 PM May 23, 2020 | Sriram |

ಬೆಂಗಳೂರು: ವಲಸೆ ಕಾರ್ಮಿಕರನ್ನು ಅವರ ತವರು ರಾಜ್ಯಗಳಿಗೆ ಕಳುಹಿಸುವ ವಿಷಯದಲ್ಲಿ ರಾಜ್ಯ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Advertisement

ಊರುಗಳಿಗೆ ವಾಪಸಾಗಲು ನೋಂದಾವಣೆಗಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೇರಿದ್ದ ಹೊರರಾಜ್ಯಗಳ ವಲಸಿಗರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಅವರು ಆಲಿಸಿದರು.

ಹೊರರಾಜ್ಯದ ವಲಸಿಗರಿಗೆ ರೈಲು ಟಿಕೆಟ್‌ ವೆಚ್ಚ ಭರಿಸುವುದಾಗಿ ರಾಜ್ಯ ಸರಕಾರ ಹೇಳಿತ್ತು. ಆದರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ನೆಲೆಯೂ ಇಲ್ಲದೆ ಊರಿಗೂ ತೆರಳಲಾಗದೆ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಜನ ಕಷ್ಟಪಡುತ್ತಿದ್ದಾರೆ. ಸರಕಾರ ತಮ್ಮ ಕೈಯಲ್ಲಿ ಆಗುವುದಿಲ್ಲ ಎಂದು ಹೇಳಿದರೆ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಚೆಕ್‌ ಕೊಡಲು ತಾನು ಸಿದ್ಧ ಎಂದು ಡಿಕೆಶಿ ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next