Advertisement

ಗೋವಾ: ಸರ್ಕಾರದ ಸಮಾಜ ಕಲ್ಯಾಣ ಯೋಜನೆಗಳನ್ನು ನಿಲ್ಲಿಸಿಲ್ಲ: ಸಿಎಂ ಸಾವಂತ್ ಸ್ಪಷ್ಟನೆ

06:23 PM Apr 12, 2022 | Team Udayavani |

ಪಣಜಿ: ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಯೋಜನೆಗಳನ್ನು ನಿಲ್ಲಿಸಲಾಗಿದೆ ಎಂಬ ಆರೋಪವನ್ನು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಳ್ಳಿಹಾಕಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲ ಸಮಾಜ ಕಲ್ಯಾಣ ಯೋಜನೆಗಳು ಜಾರಿಯಲ್ಲಿದೆ. ಫಲಾನುಭವಿಗಳು ತಮ್ಮ ಹಣ ಪಡೆದುಕೊಳ್ಳುವಲ್ಲಿ ಯಾವುದಾದರೂ ತೊಂದರೆಯುಂಟಾಗಿರಬಹುದು. ಆದರೆ ನಾವು ಯಾವುದೇ ಯೋಜನೆಗೆ ಹಣ ನೀಡುವುದನ್ನು ನಿಲ್ಲಿಸಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.

ರಾಜ್ಯದಲ್ಲಿ ದಯಾನಂದ ಸಾಮಾಜಿಕ ಸುರಕ್ಷಾ ಯೋಜನೆ ಅಡಿಯಲ್ಲಿ ಹಣ ನೀಡುವಲ್ಲಿ ಎಂದೆರಡು ತಿಂಗಳು ವಿಳಂಭವಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ಒಪ್ಪಿಕೊಂಡರು. ಇದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next