Advertisement

ನೊಂದ ಕುಟುಂಬಗಳಿಗೆ ನೆರವು

12:44 PM Jan 03, 2022 | Team Udayavani |

ಕಮಲನಗರ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಶನಿವಾರ ಕಮಲನಗರ ತಾಲೂಕಿನ ಎಂ.ಪಿ. ಡೋಣಗಾಂವ ಗ್ರಾಮಕ್ಕೆ ಭೇಟಿ ನೀಡಿ ಸಂಕಷ್ಟದಲ್ಲಿರುವ ಜನರಿಗೆ ಧನಸಹಾಯ ಮಾಡಿದರು.

Advertisement

ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಶಿವರಾಜ ಸಂಗನಾಳ ಹಾಗೂ ವಿದ್ಯುತ್‌ ಅವಘಡದಿಂದ ಮೃತಪಟ್ಟ ಸೂರ್ಯಕಾಂತ ಲಕ್ಷ್ಮಣ ಡೋಂಗ್ರೆ ಅವರ ಮನೆಗೆ ತೆರಳಿದ ಸಚಿವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬಳಿಕ ಅವರ ಸಮಸ್ಯೆಗಳನ್ನು ಆಲಿಸಿ, ವೈಯಕ್ತಿಕವಾಗಿ ಸಹಾಯ ಮಾಡಿದರು. ನೊಂದ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ ಸಚಿವರು, ಸಾರ್ವಜನಿಕರ ಸೇವೆಗೆ ನಾನು ಸದಾ ಸಿದ್ಧನಿದ್ದೇನೆ. ಯಾವುದೇ ರೀತಿಯ ಸಮಸ್ಯೆಗಳು ಎದುರಾದಲ್ಲಿ ತಮ್ಮನ್ನು ನೇರವಾಗಿ ಭೇಟಿ ಮಾಡಿ ಪರಿಹಾರ ಕಂಡುಕೊಳ್ಳಬಹುದೆಂದು ಧೈರ್ಯ ನೀಡಿದರು.

ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಎಪಿಎಂಸಿ ಅಧ್ಯಕ್ಷ ರಂಗರಾವ್‌ ಜಾಧವ, ಗ್ರಾಪಂ ಅಧ್ಯಕ್ಷ ಶಿವಕುಮಾರ ಜುಲೆ, ಮುಖಂಡರಾದ ಶಿವಾನಂದ ವಡ್ಡೆ, ಮಾಧವರಾವ್‌ ಚಾನಗುಣಿ, ಬಸವರಾಜ ಪಾಟೀಲ, ಗಿರೀಶ ಒಡೆಯರ್‌, ನಾಗೇಶ ಪತ್ರೆ, ಬಾಲಾಜಿ ತೇಲಂಗ ಇತರರಿದ್ದರು.

ಸಚಿವ ಪ್ರಭು ಚವ್ಹಾಣ್‌ ಅವರು ಜ. 1ರಂದು ಕಮಲನಗರದಲ್ಲಿ ಏರ್ಪಡಿಸಲಾದ ಅಖಂಡ ಹರಿನಾಮ ಸಪ್ತಾಹದಲ್ಲಿ ಭಾಗವಹಿಸಿದರು. ವ್ಯವಸ್ಥಿತವಾಗಿ ನಡೆಯುತ್ತಿರುವ ಹರಿನಾಮ ಸಪ್ತಾಹ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next