Advertisement

ರಾಜ್ಯಪಾಲರು ಸರ್ವ ಪಕ್ಷ ಸಭೆಯಲ್ಲಿ ಭಾಗಿಯಾಗಿದ್ದು ಸಂವಿಧಾನ ಬಾಹಿರ : ಸಿದ್ದರಾಮಯ್ಯ

06:16 PM Apr 20, 2021 | Team Udayavani |

ಬೆಂಗಳೂರು : ಕೋವಿಡ್ ನಿಯಂತ್ರಣ ಮತ್ತು ಬೆಂಗಳೂರು ಲಾಕ್ ಡೌನ್ ಸಂಬಂಧಿಸಿದಂತೆ ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆಯಲ್ಲಿ ಮಂಗಳವಾರ (ಏಪ್ರಿಲ್ 20) ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಪಾಲರು ಈ ಸಭೆಯನ್ನು ಕರೆದಿರುವುದು ಸಂವಿಧಾನ ಬಾಹಿರ. ಆಡಳಿತದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ಮಾಡಿರುವುದು ಕೂಡ ಸಂವಿಧಾನ ಬಾಹಿರ ಎಂದು ಸರ್ವ ಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಅಸಮಧಾನ ಹೊರ ಹಾಕಿದ್ದಾರೆ.

Advertisement

ನವೆಂಬರ್ ನಲ್ಲೇ ತಜ್ಞರು ಕೋವಿಡ್ ಸೋಂಕಿನ ಬಗ್ಗೆ ವರದಿಯನ್ನು ನೀಡಿದ್ದಾರೆ. ತಜ್ಞರ ವರದಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. 2 ನೇ ಅಲೆ ಬಗ್ಗೆ ಮಾಹಿತಿ ಇದ್ದರೂ ಕೂಡ ಸರ್ವ ಪಕ್ಷ ಸಭೆ ಕರೆಯದೇ ಇರುವುದು ಸರ್ಕಾರದ ತಪ್ಪು ಎಂದು ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಮೊದಲೇ ಜಾತ್ರೆ ಸಮಾರಂಭಗಳಿಗೆ ನಿರ್ಬಂಧ ಹೇರಬೇಕಿತ್ತು. ಮೊದಲೇ ಇವುಗಳನ್ನೆಲ್ಲ ನಿರ್ಬಂಧಿಸಿದ್ರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ.  ನಾನು, ಯಡಿಯೂರಪ್ಪ, ಕುಮಾರಸ್ವಾಮಿ ಉಪ ಚುನಾವಣೆಯಲ್ಲಿ ಭಾಗಿಯಾಗಿದ್ದೆವು. ಉಪ ಚುನಾವಣೆ ನಡೆಯದಿದ್ರೆ ಸಂವಿಧಾನ ಬಿಕ್ಕಟ್ಟು ಆಗುತ್ತಿರಲಿಲ್ಲ. ಪ್ರಧಾನಿಗಳು ಕೂಡ ಈ ಬಗ್ಗೆ ಗಮನ ಕೊಡಲಿಲ್ಲ. ಚುನಾವಣೆ ವೇಳೆ ಸ್ಯಾನಿಟೈಸರ್ ಇಲ್ಲ, ಸಾಮಾಜಿಕ ಅಂತರ ಇಲ್ಲ. ಇನ್ನು ನನಗಿರುವ ಮಾಹಿತಿ ಪ್ರಕಾರ ಸಿಎಂ ಅವರ ಮಾತನ್ನು ಆರೋಗ್ಯ ಸಚಿವರು ಕೇಳುತ್ತಿಲ್ಲ. ಸಿಎಂ ಮತ್ತು ಸುಧಾಕರ್ ನಡುವೆ ಹೊಂದಾಣಿಕೆ ಇಲ್ಲ ಎಂದು ಸಿದ್ದರಾಮಯ್ಯ ಖಾರವಾಗಿ ಮಾತನಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next