Advertisement

ರಾಜ್ಯಪಾಲರ ನಡೆ ಖಂಡನೀಯ

12:02 PM May 18, 2018 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಸರ್ಕಾರ ರಚಿಸಲು ಮುಂದೆ ಬಂದಿದ್ದು, ಅವಶ್ಯಕ ಸಂಖ್ಯೆಯನ್ನು ಹೊಂದಿದ್ದರೂ ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿರುವು ಖಂಡನೀಯ ಎಂದು  ಎಸ್‌ಯುಸಿಐ(ಕಮ್ಯೂನಿಸ್ಟ್‌ ) ಹೇಳಿದೆ.

Advertisement

ಕೇಂದ್ರ ಸರ್ಕಾರದ ಸೂಚನೆಯಂತೆ ಹೇಗಾದರೂ ಬಿಜೆಪಿಯನ್ನು ಅಧಿಕಾರಕ್ಕೇರಿಸಲು ರಾಜ್ಯಪಾಲರು ಪ್ರಜಾತಾಂತ್ರಿಕ ಆಚರಣೆ ಹಾಗೂ ನ್ಯಾಯಾಂಗೀಯ ತೀರ್ಪುಗಳನ್ನು ಉಲ್ಲಂ ಸಿ ಕುದುರೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಎಸ್‌ಯುಸಿಐ ರಾಜ್ಯ ಕಚೇರಿ ಕಾರ್ಯದರ್ಶಿ ಕೆ.ಉಮಾ ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next