Advertisement
ಜಿ.ಪಂ ಅಧ್ಯಕ್ಷ ಸಿ.ಮುನಿರಾಜು ನೇತೃತ್ವದಲ್ಲಿ ಬನಶಂಕರಿಯ ನಗರ ಜಿ.ಪಂ ಆವರಣದಲ್ಲಿ ನಡೆದ ವರ್ಷದ ಕೊನೆಯ ಸಾಮಾನ್ಯ ಸಭೆಯಲ್ಲಿ ಸಿಂಗಾನಯಕನಹಳ್ಳಿ ಕ್ಷೇತ್ರದ ಸದಸ್ಯೆ ಸಿ.ಲಾವಣ್ಯ, ಅನುದಾನ ಹಂಚಿಕೆ ವಿಚಾರದಲ್ಲಿ ಮಹಿಳಾ ಸದಸ್ಯರ ಕ್ಷೇತ್ರಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿದರು.
Related Articles
Advertisement
25 ನಿವೇಶನ ಪರಭಾರೆ : ಆನೇಕಲ್ ತಾಲೂಕಿನ ಬನ್ನೇರುಘಟ್ಟ ಗ್ರಾಮದಲ್ಲಿ 175 ನಿವೇಶನಗಳನ್ನು ಬಡವರಿಗೆ ವಿತರಿಸಿದ್ದು, ಇದರಲ್ಲಿ 25 ನಿವೇಶನಗಳನ್ನು ಈಗಾಗಲೇ ಬೇರೆಯವರಿಗೆ ಮಾರಾಟ ಮಾಡಲಾಗಿದೆ. ಪರಾಭಾರೆಯಲ್ಲಿ ರಾಜಕೀಯ ಮುಖಂಡರು ಮತ್ತು ಅಧಿಕಾರಿಗಳು ಶಾಮೀಲಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸದಸ್ಯೆ ಜಯಶ್ರೀ ಅಚ್ಯುತರಾಜು ಒತ್ತಾಯಿಸಿದರು.
ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿದ ನಂತರ 15 ವರ್ಷಗಳವರೆಗೆ ಪರಭಾರೆ ಮಾಡುವ ಹಾಗಿಲ್ಲ. ಒಂದು ವೇಳೆ ನಿವೇಶ ಮಾರಾಟ ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ವರದಿ ನೀಡುವಂತೆ ಅಧ್ಯಕ್ಷ ಮುನಿರಾಜು ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
ಪಕ್ಕದ ಆಸ್ಪತ್ರೆಗೆ ಹೋಗಿ: ಜಿ.ಪಂ ವ್ಯಾಪ್ತಿಯಲ್ಲಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆಗಳಿದ್ದರೂ, ವೈದ್ಯಾಧಿಕಾರಿಗಳು ಸರಿಯಾದ ವೇಳೆಗೆ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಬಡವರ ಸೇವೆ ಮಾಡಬೇಕೆಂಬ ಕಾಳಜಿ ಅವರಿಗಿಲ್ಲ. ಯಲಹಂಕದ ವೈದ್ಯಾಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರಗೆ ಬರುವ ಬಡ ರೋಗಿಗಳನ್ನು ತಮ್ಮ ಪತ್ನಿಯ ಆಸ್ಪತ್ರೆಗೆ ಕಳುಹಿಸಿ, ಬಡವರ ಸುಲಿಗೆ ಮಾಡುತ್ತಿದ್ದಾರೆ.
ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಚೊಕ್ಕನಹಳ್ಳಿ ವೆಂಕಟೇಶ್ ಆಗ್ರಹಿಸಿದರು. ಹಲವು ಆಸ್ಪತ್ರೆಗಳಲ್ಲಿ ಆ್ಯಂಬುಲೆನ್ಸ್ಗಳಿವೆ. ಆದರೆ ಚಾಲಕರೇ ಇಲ್ಲ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಒದಗಿಸಬೇಕು ಎಂದು ವೆಂಕಟೇಶ್ ಮನವಿ ಮಾಡಿದರು.
ಅನಾಹುತವಾದರೆ ಅಧಿಕಾರಿಗಳೇ ಹೊಣೆ: ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೆಲವು ಸರ್ಕಾರಿ ಶಾಲೆಗಳ ಕಟ್ಟಡಗಳು ಶಿಥಿಲ ಸ್ಥಿತಿಯಲಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ, ಅಧಿಕಾರಿಗಳು ನಮ್ಮ ಮಾತಿಗೆ ಬೆಲೆ ಕೊಡುತ್ತಿಲ್ಲ.
ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ಹಲವು ಸದಸ್ಯರು ಪ್ರಶ್ನಿಸಿದರು. ಈ ವೇಳೆ ಮಾತನಾಡಿದ ಸಿಇಒ ಅರ್ಚನಾ, ಅಧಿಕಾರಿಗಳು ಗಮನಹರಿಸದಿದ್ದರೆ ಅವರೇ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಸಿದರು. ಉಪಾಧ್ಯಕ್ಷೆ ಪಾರ್ವತಿ ಚಂದ್ರಪ್ಪ ಉಪಸ್ಥಿತರಿದ್ದರು.