Advertisement

ವಿಶ್ವನಾಥ್‌ಗೆ ತಿರುಗೇಟು ನೀಡಿದ ಸಚಿವ ಜಿಟಿಡಿ

06:43 AM Jun 24, 2019 | Team Udayavani |

ಮೈಸೂರು: ಇಷ್ಟವಿಲ್ಲದಿದ್ದರೆ ನೀವು ಬಿಟ್ಟು ಹೋಗಿ ಎಂದು ಮೈತ್ರಿ ಪಕ್ಷದ ಭಾಗವಾದ ಕಾಂಗ್ರೆಸ್‌ಗೆ ಹೇಳುವ ಅಧಿಕಾರ ಯಾರಿಗೂ ಇಲ್ಲ ಎಂದು ಎಚ್‌.ವಿಶ್ವನಾಥ್‌ಗೆ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದಾರೆ.

Advertisement

ಇಷ್ಟವಿದ್ದರೆ ಇರಿ, ಇಲ್ಲವಾದರೆ ಬೆಂಬಲ ವಾಪಸ್‌ ಪಡೆದುಕೊಂಡು ಹೋಗಿ ಎಂಬ ವಿಶ್ವನಾಥ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಜೆಡಿಎಸ್‌ ಹಾಗೂ ಕಾಂಗ್ರೆಸ್‌ಗೆ ಇಷ್ಟ ಇಲ್ಲದಿದ್ದರೂ ಮತದಾರರು ಸೃಷ್ಟಿಸಿದ ಅನಿವಾರ್ಯ ಕಾರಣಕ್ಕೆ ಮೈತ್ರಿ ಸರ್ಕಾರ ರಚನೆಯಾಗಿದೆ.

ಜನರು ಬಿಜೆಪಿಗೆ ವಿರುದ್ಧವಾಗಿ ಸರ್ಕಾರ ರಚಿಸುವಂತೆ ಆದೇಶ ನೀಡಿದರು. ಹೀಗಾಗಿ, ರಾಜ್ಯದಲ್ಲಿ ಜನರ ತೀರ್ಪಿನ ಪ್ರಕಾರ ಸರ್ಕಾರ ರಚಿಸಿದ್ದೇವೆ. ರಾಷ್ಟ್ರೀಯ ಅಧ್ಯಕ್ಷರು ಪಕ್ಷದ ಬಗ್ಗೆ ಮಾತನಾಡುತ್ತಾರೆ. ವಿಶ್ವನಾಥ್‌ ಅವರು ಅಧ್ಯಕ್ಷಗಿರಿಗೆ ರಾಜೀನಾಮೆ ನೀಡಿದ್ದು, ಅವರಿಗೆ ಮಾತನಾಡಲು ಬೇರೆ ಸುದ್ದಿ ಇಲ್ಲ ಎಂದು ತಿರುಗೇಟು ನೀಡಿದರು.

ಜೆಡಿಎಸ್‌ ಮೈತ್ರಿಯಿಂದ ಕಾಂಗ್ರೆಸ್‌ಗೆ ಹಿನ್ನೆಡೆಯಾಯಿತು ಎಂಬ ವೀರಪ್ಪ ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿ, ಎರಡೂ ಪಕ್ಷಗಳ ನಾಯಕರು ಅಣ್ಣತಮ್ಮಂದಿರ ರೀತಿ ಸಮ್ಮಿಶ್ರ ಸರ್ಕಾರ ರಚಿಸಿದ ಮೇಲೆ ನಾವು ಏಕೆ ವಿವಾದಾತ್ಮಕ ಹೇಳಿಕೆ ನೀಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next