Advertisement
2ನೇ ತರಗತಿಯಲ್ಲಿ ಕಲಿಯುತ್ತಿದ್ದ ಬಾಲಕ ನಳಿನ್ ಅವರನ್ನು ಪಾಲ್ತಾಡಿಯ ಮಂಜುನಾಥನಗರದಲ್ಲಿ ನಡೆಯುತ್ತಿದ್ದ ಆರ್ಎಸ್ಎಸ್ನ ನಿತ್ಯ ಶಾಖೆಗೆ ಕರೆತಂದವರು ಸಂಘದ ಹಿರಿಯ ಕಾರ್ಯಕರ್ತ ಬಿ.ಕೆ. ರಮೇಶ್ ಅವರು.
ಬಿ.ಕೆ. ರಮೇಶ್ ಅವರನ್ನು ಇಂದಿಗೂ ಗುರುಗಳೆಂದು ಗೌರವಿಸುವ ನಳಿನ್ ಕುಮಾರ್ ಊರಿಗೆ ಬಂದಾಗ ಅವರನ್ನು ಮಾತಾಡಿಸದೆ ಹೋಗುವುದು ಅಪರೂಪ. ನಳಿನ್ ಕುಮಾರ್ ತನ್ನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬಲ್ಲರು ಎಂದು ಹೆಮ್ಮೆಯಿಂದ ಹೇಳುತ್ತಾರೆ ಬಿ.ಕೆ. ರಮೇಶ್.
Related Articles
ತನ್ನ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಬೆಳವಣಿಗೆಯ ಮೂಲ ಬೇರು ಆಗಿರುವ ಗುರು ರಮೇಶ್ ಅವರನ್ನು ಗೌರವದಿಂದಲೇ ಕಾಣುವ ನಳಿನ್ ಅನುದಾನ ಬಳಕೆಯಲ್ಲಿ ನಂ. 1 ಸಂಸದನಾಗಿ ಹೊರಹೊಮ್ಮಿದಾಗ ಮಂಗಳೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಅವರನ್ನು ಗೌರವಿಸಿದ್ದರು.
Advertisement
3 ಸಲವೂ ಚುನಾವಣೆಯ ಪ್ರಚಾರ ಆರಂಭಿಸುವಾಗ ರಮೇಶ್ ಅವರ ಕೈಯಿಂದಲೇ ಪ್ರಚಾರ ಸಭೆಗೆ ಚಾಲನೆ ನೀಡಿದ್ದಾರೆ. ನಳಿನ್ ಪ್ರತೀ ವರ್ಷವೂ ತನ್ನೂರಿನ ಸಿದ್ಧಿವಿನಾಯಕ ಸೇವಾ ಸಂಘದ ವತಿಯಿಂದ ನಡೆಯುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.
– ಪ್ರವೀಣ್ ಚೆನ್ನಾವರ