Advertisement

ಸರ್ದಾರ್‌ ಪಟೇಲರ ಬಗ್ಗೆ ಕೈ ಆಕ್ಷೇಪಾರ್ಹ ಮಾತು

12:01 AM Oct 19, 2021 | Team Udayavani |

ಹೊಸದಿಲ್ಲಿ: ಇತ್ತೀಚೆಗೆ ನಡೆದಿದ್ದ ಕಾಂಗ್ರೆಸ್‌ ಕಾರ್ಯಕಾರಿಣಿಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್‌ ನಾಯಕ ತಾರೀಕ್‌ ಹಮೀದ್‌ ಕರ್ರಾ, ದೇಶದ ಪ್ರಪ್ರಥಮ ಗೃಹ ಸಚಿವ ಸರ್ದಾರ್‌ ವಲ್ಲಭಭಾಯಿ ಪಟೇಲರ ವಿರುದ್ಧ ಆಕ್ಷೇ ಪಾರ್ಹವಾಗಿ ಮಾತನಾಡಿದ್ದಾರೆ ಎಂದು ಕೆಲವು ಮಾಧ್ಯ ಮಗಳಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದೆ.

Advertisement

ದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ, “ಪಟೇಲರಿಗೆ ಜಮ್ಮು ಕಾಶ್ಮೀರವನ್ನು ಪಾಕಿಸ್ಥಾನಕ್ಕೆ ಬಿಟ್ಟುಕೊಡುವ ಇರಾದೆಯಿತ್ತು. ಆದರೆ ಆಗಿನ ಪ್ರಧಾನಿ ನೆಹರೂ ಅವರಿಗೆ ಜಮ್ಮು ಕಾಶ್ಮೀರವನ್ನು ಉಳಿಸಿ ಕೊಳ್ಳುವ ಮನಸ್ಸಿತ್ತು. ಆದರೂ ಹಠ ಬಿಡದ ಪಟೇಲರು, ಪಾಕಿಸ್ಥಾನ ಸಂಸ್ಥಾಪಕ ಮೊಹಮ್ಮದ್‌ ಅಲಿ ಜಿನ್ನಾರಲ್ಲಿ ಜಮ್ಮು ಕಾಶ್ಮೀರವನ್ನು ನೀವೇ ಪಡೆಯಬೇಕೆಂದು ತಾಕೀತು ಮಾಡಿ ದ್ದರು ಎಂದು ಕರ್ರಾ ಅವರು ಕಾಂಗ್ರೆಸ್‌ ಕಾರ್ಯಕಾರಿಣಿಯಲ್ಲಿ ಹೇಳಿದ್ದಾ ರೆಂದು ಕೆಲವು ಪತ್ರಿಕೆಗಳು ವರದಿ ಮಾಡಿವೆ. ಸಭೆಯ ಅಧ್ಯಕ್ಷತೆ ವಹಿಸಿದ್ದ ಸೋನಿಯಾ ಗಾಂಧಿ ಈ ಬಗ್ಗೆ ಏನು ಹೇಳುತ್ತಾರೆ?’ ಎಂದು ಪ್ರಶ್ನಿಸಿದ ಅವರು, “”ಕರ್ರಾ ಅವರ ಹೇಳಿಕೆ ಗಾಂಧಿ ಪರಿವಾರದ ಬಗ್ಗೆ ಕಾಂಗ್ರೆಸ್‌ನ ನಾಯಕರು ಹೊಂದಿರುವ ಭಟ್ಟಂಗಿತನ ವನ್ನು ತೋರಿಸುತ್ತದೆ” ಎಂದಿದ್ದಾರೆ.

ಇದನ್ನೂ ಓದಿ:ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕಾಂಗ್ರೆಸ್‌ ಪ್ರತಿಕ್ರಿಯೆ: ಸಂಬಿತ್‌ ಪಾತ್ರಾರ ಆರೋಪಗಳನ್ನು ತಿರಸ್ಕರಿಸಿರುವ ಕಾಂಗ್ರೆಸ್‌ ವಕ್ತಾರ ರಣದೀಪ್ ಸುರ್ಜೆವಾಲಾ, “”ಕಾಂಗ್ರೆಸ್‌ ವಿರುದ್ಧ ಇಂಥ ಆರೋಪಗಳನ್ನು ಮಾಡುವ ಮೂಲಕ ಬಿಜೆಪಿ, ಪ್ರಧಾನಿ ಮೋದಿ ಯವರು ಪುಂಖಾನುಪುಂಖ ವಾಗಿ ನೀಡುವ ಸುಳ್ಳು ಹೇಳಿಕೆಗಳನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ” ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next