Advertisement

ಹನುಮ ಜಯಂತಿ ಮೆರವಣಿಗೆ ರದ್ದು, ಪೂಜೆಗೆ ಮಾತ್ರ ಸೀಮಿತ

12:03 PM Dec 17, 2021 | Team Udayavani |

ಹುಣಸೂರು: ಡಿ.18ರಂದು ನಡೆಯಲಿರುವ ಹನುಮ ಜಯಂತಿಗೆ ನಗರದ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಪೂಜೆ, ಹೋಮ-ಹವನ, ದೇವರ ವಿಗ್ರಹ ಪ್ರತಿಷ್ಠಾಪಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

Advertisement

ವಿವಿಧ ದೇವಾಲಯಗಳಿಂದ ತರಲಾಗಿದ್ದ ಬೃಹತ್ ಆಂಜನೇಯ ಮೂರ್ತಿ, ಕಂಚಿನ ಆಂಜನೇಯ, ಸೀತಾಮಾತೆ ಸಹಿತ ರಾಮ-ಲಕ್ಷ್ಮಣ ಹಾಗೂ ವೀರಾಂಜನೇಯ ವಿಗ್ರಹಗಳು ಹಾಗೂ ಪ್ರಥಮ ಬಾರಿಗೆ ಬೆಂಗಳೂರಿನ ದಾನಿಗಳು ನಿರ್ಮಿಸಿಕೊಟ್ಟಿರುವ ದತ್ತಾತ್ರೇಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದ್ದು, ಮುಂಜಾನೆ ಆಂಜನೇಯಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ, ಹೋಮ ಹವನ ನಡೆಸಲಾಯಿತು. ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ಆಯೋಜಿಸಲಾಗಿತ್ತು. ಈ ವೇಳೆ ಜಯಂತಿ ಸಮಿತಿಯ ಅಧ್ಯಕ್ಷ ವಿ.ಎನ್.ದಾಸ್, ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಅನಿಲ್ ಸೇರಿದಂತೆ ಅನೇಕರಿದ್ದರು.

ಮೆರವಣಿಗೆ ರದ್ದು

ಕೋವಿಡ್ ಮೂರನೇ ಅಲೆ ಹಿನ್ನಲೆಯಲ್ಲಿ ಜಿಲ್ಲಾಡಳಿತದ ಸೂಚನೆಯಂತೆ ಈ ಬಾರಿ ಹನುಮಂತೋತ್ಸವದ ಅಂಗವಾಗಿ ನಡೆಯುತ್ತಿದ್ದ ಮೆರವಣಿಗೆಯನ್ನು ರದ್ದುಗೊಳಿಸಲಾಗಿದ್ದು. ಆಂಜನೇಸ್ವಾಮಿ ದೇವಾಲಯದ ಆವರಣದಲ್ಲಿ ಮಹಿಳೆಯರಿಗೆ ಸ್ಪರ್ಧೆ ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ವಿವಿಧ ಪೂಜೆಗಳು ನಡೆಯಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next