Advertisement

ಎ‍ಚ್ಡಿಡಿ ಸೂಚಿಸಿದರೆ ಹಾಸನದಲ್ಲಿ ಪ್ರಜ್ವಲ್‌ ಸ್ಪರ್ಧೆ

12:30 AM Feb 05, 2019 | Team Udayavani |

ಕಲಬುರಗಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ವಿಚಾರ ಹಾಗೂ ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ, ಹಿರಿಯ ಮುಖಂ ಡರು ಅಂತಿಮ ತೀರ್ಮಾನ ತೆಗೆದು ಕೊಳ್ಳುತ್ತಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರು ಸೂಚಿಸಿದರೆ ನನ್ನ ಮಗ ಪ್ರಜ್ವಲ ಸ್ಪರ್ಧಿಸುತ್ತಾನೆ. ಚುನಾ ವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ನನ್ನ ಮಗ ಹಿಂಬಾಗಿಲಿನಿಂದ ಹೋಗಿಲ್ಲ. ಮಂಡ್ಯ ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಶಾಸಕರೇ ಇದ್ದಾರೆ. ಆ ಕ್ಷೇತ್ರದ ಬಗ್ಗೆಯೂ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next