Advertisement

ನೀರು ಹರಿಸಿದ ಮಹಾರಾಷ್ಟ್ರ ಸಿಎಂಗೆ ಎಚ್ಡಿಕೆ ಅಭಿನಂದನೆ

11:19 PM May 04, 2019 | Lakshmi GovindaRaj |

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ಮಹಾರಾಷ್ಟ್ರದಿಂದ ಕೃಷ್ಣಾ, ಭೀಮಾ ನದಿಗೆ ನೀರು ಬಿಡುಗಡೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Advertisement

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತೀವ್ರ ಬರಗಾಲದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರಗಳನ್ನು ಬರೆದು ನೀರು ಹರಿಸಲು ಮನವಿ ಮಾಡಿತ್ತು. ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳು ಈ ಕುರಿತು ಮುಖ್ಯಮಂತ್ರಿಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಮಹಾರಾಷ್ಟ್ರ ಸರ್ಕಾರ, ನೀರು ಹರಿಸಲು ಸಮ್ಮತಿ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next