Advertisement

Politics: ಚುನಾವಣ ತಕರಾರು ಪ್ರಕರಣ ರದ್ದು ಕುರಿತಾದ ವಿಚಾರಣೆ ಪೂರ್ಣ

12:37 AM Oct 06, 2023 | Team Udayavani |

ಕಾಸರಗೋಡು: ಮಂಜೇಶ್ವರ ವಿಧಾನಸಭೆಗೆ ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಲಂಚ ನೀಡಲಾಗಿದೆ ಎಂದು ಆರೋಪಿಸಿ ನೀಡಲಾದ ದೂರಿನಂತೆ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣವನ್ನು ರದ್ದುಪಡಿಸುವಂತೆ ಈ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಹೆಸರಿಸಲಾಗಿರುವ ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್‌ ಮತ್ತು ಇತರ ನಾಲ್ವರು ಸಲ್ಲಿಸಿರುವ ಅರ್ಜಿ ಮೇಲಿನ ವಿಚಾರಣೆ ಕಾಸರಗೋಡು ಜಿಲ್ಲಾ ಸೆಷನ್ಸ್‌ ನ್ಯಾಯಾಲಯದಲ್ಲಿ ಪೂರ್ಣಗೊಂಡಿದೆ. ಇದರ ತೀರ್ಪನ್ನು ನ್ಯಾಯಾಲಯ ಅ. 10ಕ್ಕೆ ಮೀಸಲಿರಿಸಿದೆ.

Advertisement

ಪ್ರಕರಣ ದಾಖಲಾಗಿತ್ತು
ಬಿ.ಎಸ್‌.ಪಿ. ಉಮೇದುದಾರರಾಗಿ ನಾಮಪತ್ರ ಸಲ್ಲಿಸಿದ್ದ ಕೆ. ಸುಂದರ ನಾಮಪತ್ರವನ್ನು ಹಿಂತೆಗೆದುಕೊಳ್ಳಲು ಅವರಿಗೆ ಹಣ ಮತ್ತು ಮೊಬೈಲ್‌ ಫೋನ್‌ ನೀಡಲಾಗಿತ್ತು ಎಂದು ಆರೋಪಿಸಿ ನೀಡಲಾದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next