Advertisement
ಮೇ 23ರಿಂದ 27ರವರೆಗೆ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 5ರಂದು ಕರ್ನಾಟಕಕ್ಕೆ ನೈಋತ್ಯ ಮುಂಗಾರು ಆಗಮನವಾಗಲಿದೆ. ಈ ವರ್ಷ ರಾಜ್ಯದಲ್ಲಿ ನೈಋತ್ಯ ಮುಂಗಾರು ಸಹಜವಾಗಿದ್ದು, ಜೂನ್ ತಿಂಗಳಿನಿಂದಸೆಪ್ಟೆಂಬರ್ವರೆಗೆ ಶೇ.97ರಷ್ಟು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂಲಗಳನ್ನು ಉಲ್ಲೇಖೀಸಿ ನಾಗನಹಳ್ಳಿ ಗ್ರಾಮೀಣ ಕೃಷಿ ಹವಾಮಾನ ಸೇವಾ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಪಿ.ಪ್ರಕಾಶ್ ತಿಳಿಸಿದ್ದಾರೆ.