Advertisement

ಯಥಾಸ್ಥಿತಿಗೆ ಹೈಕೋರ್ಟ್‌ ನಿರ್ದೇಶನ

07:09 AM Jan 12, 2019 | Team Udayavani |

ಬೆಂಗಳೂರು: ಮೈಸೂರು ಅಧೀನ ನ್ಯಾಯಾಲಯಗಳಿಗೆ ಬೇರೆ ಜಿಲ್ಲೆಗಳಿಂದ ವರ್ಗಾವಣೆಗೊಂಡಿರುವ ಎಂಟು ಮಂದಿ ಶಿರಸ್ತೇದಾರರ ನಿಯುಕ್ತಿ ಆದೇಶಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ.

Advertisement

ಶಿರಸ್ತೇದಾರರ ಅಂತರ್‌ ಜಿಲ್ಲಾ ವರ್ಗಾವಣೆ ಪ್ರಶ್ನಿಸಿ ಮೈಸೂರು ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ (ಎಫ್ಡಿಎ) ಸೇವೆ ಸಲ್ಲಿಸುತ್ತಿರುವ ಹಾಗೂ ಶಿರಸ್ತೇದಾರರಾಗಿ ಸೇವಾ ಮುಂಬಡ್ತಿ ಹೊಂದಲು ಎಲ್ಲ ಅರ್ಹತೆಗಳನ್ನು ಹೊಂದಿರುವ ಜೆ. ಲತಾ ಸೇರಿ ಐವರು ಸಲ್ಲಿಸಿದ ಅರ್ಜಿಯನ್ನು ನ್ಯಾ. ಆರ್‌. ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಬೇರೆ ಜಿಲ್ಲೆಗಳಿಂದ ಮೈಸೂರು ಜಿಲ್ಲೆಯ ಅಧೀನ ನ್ಯಾಯಾಲಯಗಳಿಗೆ ವರ್ಗಾವಣೆಗೊಂಡಿರುವ ಶಿರಸ್ತೇದಾರರ ನಿಯುಕ್ತಿ ಸಂಬಂಧ ಅರ್ಜಿಯ ಮುಂದಿನ ವಿಚಾರಣೆವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಕಾನೂನು ಇಲಾಖೆ ಹಾಗೂ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಜ.16ಕ್ಕೆ ಮುಂದೂಡಿತು.

ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಅಡ್ವೋಕೇಟ್‌ ಜನರಲ್‌ ಹಾಜರಾಗಿ ವಾದ ಮಂಡಿಸುವಂತೆಯೂ ನ್ಯಾಯಪೀಠ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next