Advertisement

ಕೇಂದ್ರ ಮಕ್ಕಳ ರಕ್ಷಣಾ ಆಯೋಗಕ್ಕೆ ಮನವಿಗೆ ಹೈಕೋರ್ಟ್‌ ಸೂಚನೆ

02:34 PM Mar 29, 2018 | Team Udayavani |

ಬೆಂಗಳೂರು: ಅಪ್ರಾಪ್ತರಿಗೆ ಮದ್ಯ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗೀಯ ಪೀಠ ಈ ಕುರಿತು ಕೇಂದ್ರ ಮಕ್ಕಳ ರಕ್ಷಣಾ ಆಯೋಗ ಹಾಗೂ ರಾಜ್ಯ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸುವಂತೆ ಸೂಚಿಸಿ, ಅರ್ಜಿ ಇತ್ಯರ್ಥಗೊಳಿಸಿದೆ.

Advertisement

ಇಪ್ಪತ್ತು ವರ್ಷದೊಳಗಿನವರಿಗೆ ಮದ್ಯ ಮಾರಾಟ ನಿಷೇಧಿಸಿರುವ ಅಬಕಾರಿ ಕಾಯ್ದೆ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು 17ವರ್ಷದ ಲಯ ಸಜನ್‌ ಮಾರಿಯಂಡ ಎಂಬುವರು ಹೈಕೋರ್ಟ್‌ನಲ್ಲಿ ಸಾರ್ವಜನಿಕರ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ ಮುಖ್ಯನ್ಯಾಯಾಮೂರ್ತಿ ದಿನೇಶ್‌ ಮಾಹೇಶ್ವರಿ ಹಾಗೂ ಬಿ.ಎಂ.ಶ್ಯಾಮ್‌ ಪ್ರಸಾದ್‌ ಅವರ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡಬಾರದು ಎಂಬ ನಿಯಮವನ್ನು ಸರ್ಕಾರ ಜಾರಿಗೆ ತಂದಿದೆ. ಆದರೆ, ಇದನ್ನು ಇಲಾಖೆ ಸರಿಯಾಗಿ ಪಾಲಿಸುತ್ತಿಲ್ಲ.

ಇದರಿಂದ ಮದ್ಯ ಮತ್ತು ಮಾದಕ ವಸ್ತುಗಳು ಸುಲಭವಾಗಿ ಅಪ್ರಾಪ್ತರ ಕೈ ಸೇರುತ್ತಿದೆ. ಇದು ಯುವ ಸಮುದಾಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತಿದೆ. ಹೀಗಾಗಿ ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುವ ಮದ್ಯದಂಗಡಿ ಮಾಲೀಕರ ಪರವಾನಿಗೆ ರದ್ದು ಮಾಡಬೇಕು. ಇಲಾಖೆಗೆ ಹೊಸ ಮಾರ್ಗಸೂಚಿ ರಚಿಸಲು ಸರ್ಕಾರಕ್ಕೆ ಸೂಚಿಸಬೇಕು ಎಂದು ಸಜನ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next