Advertisement
ಈ ಕುರಿತು ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್. ಚೌಹಾಣ್ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಗೆ ಹಾಜರಿದ್ದ ಬಿಡಿಎ ಆಯುಕ್ತ ರಾಕೇಶ್ ಸಿಂಗ್, ನಗರಾಭಿವೃದ್ಧಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡಿತು.
Related Articles
Advertisement
ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಬಿಡಿಎ ಆಯುಕ್ತ ರಾಕೇಶ್ ಸಿಂಗ್, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ರಾಜ್ ಕುಮಾರ್ ಖತ್ರಿ ವಿರುದ್ಧದ ನ್ಯಾಯಾಂಗ ನಿಂದನೆ ಆರೋಪ ನಿಗದಿಗೆ ಸಂಬಂಧಿಸಿದಂತೆ ಸೆ.5ರಂದು ವಿಚಾರಣೆ ನಡೆಸುವುದಾಗಿ ತಿಳಿಸಿತು. ಆ ದಿನ ವಿಚಾರಣೆಗೆ ಮೂವರು ಹಾಜರಿರುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಪ್ರಕರಣ ಏನು?: ಆರ್ಎಂವಿ ಬಡವಾಣೆ ನಿರ್ಮಾಣಕ್ಕೆ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಗೆ ಪರ್ಯಾಯ ಭೂಮಿ ನೀಡುವಂತೆ ಏಕಸದಸ್ಯ ಪೀಠ 2016ರಲ್ಲಿ ತೀರ್ಪು ನೀಡಿದ್ದರೂ ಇದುವೆರಗೂ ಪಾಲಿಸಿಲ್ಲ ಎಂದು ಎಸ್.ಎನ್ ನರಸಿಂಹ ಮೂರ್ತಿ, ಸುಧಾ ಎಂಬುವವರು ಬಿಡಿಎ,ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ. ಅರ್ಜಿದಾರರ ಪರವಾಗಿ ವಕೀಲ ಚಂದ್ರನಾಥ ಅರಿಗ ವಾದಿಸಿದರು.