Advertisement

HC; ಕೊಡವರಿಗೆ ಸ್ವಾಯತ್ತತೆ; ಮಧ್ಯಾಂತರ ಅರ್ಜಿದಾರರನ್ನು ಪ್ರತಿವಾದಿಗಳನ್ನಾಗಿಸಿದ ಹೈಕೋರ್ಟ್‌

01:07 AM Aug 06, 2024 | Team Udayavani |

ಬೆಂಗಳೂರು: ಕೊಡವರಿಗೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಸಾಂವಿಧಾನಿಕ ಸ್ಥಾನಮಾನ ಕಲ್ಪಿಸುವ ಬಗ್ಗೆ ಪರಿಶೀಲನೆ ನಡೆಸಲು ಆಯೋಗವೊಂದನ್ನು ರಚಿಸಲು ನಿರ್ದೇಶಿಸಬೇಕು ಎಂದು ಕೋರಲಾಗಿರುವ ಅರ್ಜಿಯಲ್ಲಿ ಕೊಡವ ನ್ಯಾಷನಲ್‌ ಕೌನ್ಸಿಲ್‌ (ಸಿಎನ್‌ಸಿ) ಅಧ್ಯಕ್ಷ ಎನ್‌.ವಿ. ನಾಚಪ್ಪ ಕೊಡವ ಮತ್ತು ಅರ್ಜಿದಾರರ ಪರವಿರುವ ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್‌ ಸ್ವಾಮಿ ಅವರನ್ನು ಹೊರತುಪಡಿಸಿದಂತೆ ಉಳಿದೆಲ್ಲ ಮಧ್ಯಾಂತರ ಅರ್ಜಿದಾರರನ್ನು, ಪ್ರತಿವಾದಿಗಳನ್ನಾಗಿ ಪರಿಗಣಿಸುವಂತೆ ಹೈಕೋರ್ಟ್‌ ಆದೇಶಿಸಿದೆ.

Advertisement

ಈ ಕುರಿತಂತೆ ಸಿಎನ್‌ಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮೂಲ ಅರ್ಜಿದಾರರ ಪರ ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ವಾದಿಸಿ, ಕೊಡವ ಸಮುದಾಯದವರಿಗೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಸಾಂವಿಧಾನಿಕ ಸ್ಥಾನಮಾನ ಕಲ್ಪಿಸುವ ಬಗ್ಗೆ ಪರಿಶೀಲನೆ ನಡೆಸಲು ಆಯೋಗವೊಂದನ್ನು ರಚಿಸಲು ನಿರ್ದೇಶಿಸಿದರೆ ಅವರ ಸಾಂಸ್ಕೃತಿಕ ಹಕ್ಕುಗಳನ್ನೂ ಕಾಪಾಡಿದಂತಾಗುತ್ತದೆ ಎಂದು ವಾದಿಸಿದರು. ವಿಚಾರಣೆಯನ್ನು ಅಕ್ಟೋಬರ್‌ 21ಕ್ಕೆ ಮುಂದೂಡಿತು.

 

Advertisement

Udayavani is now on Telegram. Click here to join our channel and stay updated with the latest news.

Next