Advertisement

ಸಿಎಟಿ ಆದೇಶಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

06:40 AM Apr 26, 2018 | Team Udayavani |

ಬೆಂಗಳೂರು: ಬೆಳಗಾವಿ ಪೊಲೀಸ್‌ ಆಯುಕ್ತ ಸ್ಥಾನದಿಂದ ರೈಲ್ವೆ ಡಿಐಜಿಪಿ ಹುದ್ದೆಗೆ ಡಾ.ಸಿ ರಾಜಪ್ಪ ಅವರ ವರ್ಗಾವಣೆಗೆ ತಡೆ ನೀಡಿದ್ದ ಕೇಂದ್ರೀಯ ಆಡಳಿತ ನ್ಯಾಯಮಂಡಳಿ (ಸಿಎಟಿ) ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

Advertisement

ಐಪಿಎಸ್‌ ಅಧಿಕಾರಿಗಳಾದ ರಾಜಪ್ಪ ಹಾಗೂ ಎಸಿಬಿ ಐಜಿಪಿ ಚಂದ್ರಶೇಖರ್‌ ವರ್ಗಾವಣೆ ಆದೇಶಕ್ಕೆ ಸಿಎಟಿ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಕೇಂದ್ರ ಚುನಾವಣಾ ಆಯೋಗ ಎರಡು ಪ್ರತ್ಯೇಕ ರಿಟ್‌ ಅರ್ಜಿಗಳನ್ನು ಸಲ್ಲಿಸಿತ್ತು. ಬುಧವರ ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ಹಾಗೂ ನ್ಯಾಯಮೂರ್ತಿ ಬಿ. ಶ್ರೀನಿವಾಸೇಗೌಡ ಅವರಿದ್ದ ವಿಭಾಗೀಯ ಪೀಠ, ಇಬ್ಬರೂ ಅಧಿಕಾರಿಗಳ ವರ್ಗಾವಣೆಗೆ ಸಿಎಟಿ ಏ.19ರಂದು ನೀಡಿದ್ದ ತಡೆ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತು. ಜತೆಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ,ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಹಾಗೂ ಇನ್ನಿತರ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next