Advertisement
ಸಮ್ಮಿಶ್ರ ಸರ್ಕಾರದಲ್ಲಿ ಮತ್ತೆ ಗೃಹ ಸಚಿವರ ಸಲಹೆಗಾರರಾಗಿ ಕೆಂಪಯ್ಯ ಮುಂದುವರಿಯುವುದಕ್ಕೆ ತಮ್ಮ ವಿರೋಧವಿದೆ ಎಂಬ ಸಂದೇಶವನ್ನು ಕುಮಾರ ಸ್ವಾಮಿ, ಈ ಮೂಲಕ ಮಿತ್ರಪಕ್ಷ ಕಾಂಗ್ರೆಸ್ಗೆ ರವಾನಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿ ನಂತರ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳು ಸಮರ್ಥರಿದ್ದಾರೆ. ಯಾವುದಾದರೂ ಇಲಾಖೆಗೆ ಸಲಹೆಗಾರರು ಅಗತ್ಯವಿದ್ದರೆ, ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು. ಪೊಲೀಸ್ ಇಲಾಖೆಯಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪ ಮಾಡಲ್ಲ. ಅಧಿಕಾರಿಗಳೂ ಸಹ ಯಾವುದೇ ರಾಜಕೀಯ ಹಸ್ತಕ್ಷೇಪಗಳಿಗೆ ಮಣಿಯದೆ ನಿರ್ಭೀತಿಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
Advertisement
ಗೃಹ ಇಲಾಖೆಗೆ ಸಲಹೆಗಾರ ಬೇಕಿಲ್ಲ
06:00 AM Jun 01, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.