Advertisement

Ramalinga Reddy; ಸಾರಿಗೆ ನಿಗಮಗಳ ವಿಲೀನ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ

06:40 PM Feb 18, 2024 | Team Udayavani |

ಬೆಳಗಾವಿ:ವಾಯವ್ಯ, ಈಶಾನ್ಯ ಕರ್ನಾಟಕ ಸಾರಿಗೆ ಸೇರಿದಂತೆ ರಾಜ್ಯದ ನಾಲ್ಕು ನಿಗಮಗಳು ಸ್ವಾಯತ್ತ ಸಂಸ್ಥೆಗಳು. ಎಲ್ಲ ರೀತಿಯ ಅಧಿಕಾರವನ್ನು ಸಂಸ್ಥೆಗಳಿಗೆ ನೀಡಲಾಗಿದೆ. ಈ ಸಂಸ್ಥೆಗಳನ್ನು ವಿಲೀನ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಜನರ ಬೇಡಿಕೆಗೆ ಅನುಗುಣವಾಗಿ ಹೊಸ ಬಸ್‌ ಗಳನ್ನು ಖರೀದಿ ಮಾಡಲಾಗುತ್ತಿದ್ದು ಮುಂದಿನ ಎರಡು ತಿಂಗಳಲ್ಲಿ ನಾಲ್ಕೂ ಸಾರಿಗೆ ನಿಗಮಗಳಿಗೆ ಐದು ಸಾವಿರ ಬಸ್‌ಗಳು ಬರಲಿವೆ. ಏಪ್ರಿಲ್‌ ವೇಳೆಗೆ 5800 ಹೊಸ ಬಸ್‌ ಖರೀದಿ ಮಾಡಿ ನಿಗಮಗಳಿಗೆ ಒದಗಿಸಬೇಕು ಎಂಬ ಗುರಿ ಇದೆ. ಇದರಲ್ಲಿ ಐದು ಸಾವಿರ ಬಸ್‌ಗಳು ಲಭ್ಯವಾಗಲಿವೆ. ಇದಲ್ಲದೆ ಈ ಭಾಗಕ್ಕೆ ಎಲೆಕ್ಟ್ರಿಕ್ ಬಸ್‌ಗಳ ಆರಂಭಕ್ಕೆ ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಮುಂದಿನ ಮೂರು ತಿಂಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ಇನ್ನಷ್ಟು ಬಲಪಡಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುವದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next