Advertisement

ಜನರ ಕುಂದು-ಕೊರತೆಗಳಿಗೆ ಸೂಕ್ತ ಪರಿಹಾರ: ಪ್ರಮೋದ್‌

03:45 AM Jan 29, 2017 | Team Udayavani |

ಉಡುಪಿ: ಉಡುಪಿ ವಿಧಾನಸಭಾ ವ್ಯಾಪ್ತಿಯ 30 ಗ್ರಾಮ, 35 ನಗರಸಭೆ ವಾರ್ಡ್‌ಗಳ ಜನರ ಸಮಸ್ಯೆ, ಕುಂದು-ಕೊರತೆಗಳಿಗೆ ಸ್ಪಂದಿಸುವ ಮತ್ತು ಸ್ಥಳದಲ್ಲಿಯೇ ಸೂಕ್ತ ಪರಿಹಾರ ಒದಗಿಸುವ ಸದುದ್ದೇಶದಿಂದ ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ “ಜನಸಂಪರ್ಕ ಸಭೆ’ ನಡೆಸಲಾಗುತ್ತಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

Advertisement

ಪರ್ಕಳ ವಿಘ್ನೇಶ್ವರ ಸಭಾಭವನದಲ್ಲಿ ಶನಿವಾರ ನಡೆದ ಉಡುಪಿ ನಗರಸಭೆ ವ್ಯಾಪ್ತಿಯ ಶೆಟ್ಟಿಬೆಟ್ಟು ವಾರ್ಡ್‌ ಮಟ್ಟದ ಜನಸಂಪರ್ಕ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನಸಂಪರ್ಕ ಸಭೆಯಲ್ಲಿ ತಾಲೂಕುಮಟ್ಟದ ವಿವಿಧ ಇಲಾಖಾಧಿಕಾರಿಗಳು ಹಾಜರಿರುವುದರಿಂದ ಸರಕಾರವೇ ಜನರ ಬಳಿಗೆ ತೆರಳಿದಂತಾಗುತ್ತದೆ. 1,596 ಕೋ. ರೂ. ದಾಖಲೆ ಪ್ರಮಾಣದ ಅಭಿವೃದ್ಧಿ ಕಾರ್ಯಗಳ ಪರಾಮರ್ಶೆ
ಗಾಗಿ “ಗ್ರಾಮದೆಡೆ ವಿಶ್ವಾಸದ ನಡೆ’ ಏರ್ಪಡಿಸಲಾಗಿದೆ ಎಂದರು.

ಸವಲತ್ತು-ಸಹಾಯಧನ
ವಿತರಣೆ-ಸಮ್ಮಾನ

ಇದೇ ಸಂದರ್ಭ ವಿವಿಧ ಫ‌ಲಾನು ಭವಿಗಳಿಗೆ ವಿವಿಧ ಪಿಂಚಣಿ, ಸವಲತ್ತು ವಿತರಿಸಲಾಯಿತು. ಗ್ರಾಮಸ್ಥರಿಂದ ಅಹವಾಲು ಅರ್ಜಿ ಸ್ವೀಕರಿಸಿ ಬಹುತೇಕ ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲಾಯಿತು. ನಗರಸಭೆ ಅನುದಾನದಿಂದ ಉನ್ನತ ವ್ಯಾಸಂಗಕ್ಕಾಗಿ ಪೂಜಾ ಶೆಟ್ಟಿ ಹೆರ್ಗ ಅವರಿಗೆ ಸಹಾಯ ಧನದ ಚೆಕ್‌ ವಿತರಿಸಲಾಯಿತು.

ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಟು ಪರ್ಕಳದ ಪ್ರವೀಣಾ ಡಿ. ಸುವರ್ಣ ಅವರನ್ನು ಸಮ್ಮಾನಿಸಲಾಯಿತು. ಪ್ರವೀಣಾ ಡಿ. ಸುವರ್ಣ ಶಿಷ್ಯರಾದ 17 ಮಂದಿ ಕರಾಟೆ ಪಟುಗಳನ್ನು ಗೌರವಿಸಲಾಯಿತು. 

Advertisement

ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ನಿಕಟಪೂರ್ವ ಅಧ್ಯಕ್ಷ ಯುವರಾಜ್‌ ಪಿ., ನಗರಸಭೆ ಸದಸ್ಯರಾದ ಹೆರ್ಗ ದಿನಕರ ಶೆಟ್ಟಿ, ಆರ್‌.ಕೆ. ರಮೇಶ್‌ ಪೂಜಾರಿ, ನಗರಸಭೆ ನಾಮನಿರ್ದೇಶಿತ ಸದಸ್ಯರಾದ ಜನಾರ್ದನ್‌ ಭಂಡಾರ್ಕರ್‌, ಗಣೇಶ್‌ ನೇರ್ಗಿ, ಸುಕೇಶ್‌ ಕುಂದರ್‌, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜನಾರ್ದನ್‌, ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌, ಕಂದಾಯ ನಿರೀಕ್ಷಕ ಸುಧಾಕರ ಶೆಟ್ಟಿ, ಪಶು ವೈದ್ಯಾಧಿಕಾರಿ ಡಾ| ಪ್ರಶಾಂತ್‌ ಕುಮಾರ್‌ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತ ರಿದ್ದರು.

ನಗರಸಭೆ ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿ, ಪ್ರಸ್ತಾವನೆ ಗೈದರು. ಪ್ರಶಾಂತ್‌ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು. ತಹಶೀ ಲ್ದಾರ್‌ ಮಹೇಶ್ಚಂದ್ರ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next