Advertisement

ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಪದಚ್ಯುತಿ ಕಾನೂನು ಬದ್ಧ

11:26 PM May 29, 2024 | Team Udayavani |

ಬೆಂಗಳೂರು: ರಾಜ್ಯ ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಹು¨ªೆಯಿಂದ ವಿಧಾನ ಪರಿಷತ್‌ ಮಾಜಿ ಸದಸ್ಯ ಅಬ್ದುಲ್‌ ಅಜೀಮ್‌ ಅವರ ನಾಮನಿರ್ದೇಶನವನ್ನು ಹಿಂಪಡೆದ ರಾಜ್ಯ ಸರಕಾರದ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

Advertisement

ಸರಕಾರದ ಅಧೀನದ ಆಯೋಗಗಳಿಗೆ ಅಧ್ಯಕ್ಷರ ನಾಮ ನಿರ್ದೇಶನ ಮಾಡುವುದು ಮತ್ತು ಹಿಂಪಡೆಯುವುದು ಸರಕಾರದ ವಿವೇಚನೆಗೆ ಒಳಪಟ್ಟಿರುತ್ತದೆ. ಈ ಪ್ರಕ್ರಿಯೆಯಲ್ಲಿ ನೋಟಿಸ್‌ ನೀಡದೆ ಏಕಪಕ್ಷೀಯವಾಗಿ ನಾಮ ನಿರ್ದೇಶನ ಹಿಂಪಡೆಯಲಾಗಿದೆ ಎಂದು ಆರೋಪಿಸಿ ಸರಕಾರದ ಕ್ರಮವನ್ನು ಪ್ರಶ್ನಿಸಲು ಅವಕಾಶವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ತಮ್ಮನ್ನು ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಸ್ಥಾನಕ್ಕೆ ನಾಮ ನಿರ್ದೇಶನ ಹಿಂಪಡೆದಿದ್ದ ಕ್ರಮವನ್ನು ಪ್ರಶ್ನಿಸಿ ಅಬ್ದುಲ್‌ ಅಜೀಮ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಪಸಂಖ್ಯಾಕ ಆಯೋಗದ ಸೆಕ್ಷನ್‌ 4ರ ಪ್ರಕಾರ ಆಯೋಗದ ಅಧ್ಯಕ್ಷರ ನೇಮಕ ಮತ್ತು ರದ್ದು ಮಾಡುವುದು ಸರಕಾರದ ವಿವೇಚನೆಗೆ ಒಳಪಟ್ಟಿದೆ. ಆದ್ದರಿಂದ ಕಾನೂನಿನಡಿ ಸರಕಾರದ ಆದೇಶ ಕಾನೂನು ಬಾಹಿರವಾಗುವುದಿಲ್ಲ.

ಅಲ್ಲದೆ, ಅರ್ಜಿದಾರರ ಯಾವುದೇ ಹಕ್ಕನ್ನು ಕಸಿದುಕೊಂಡಂತಾಗುವುದಿಲ್ಲ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next