Advertisement

ಬಿಜೆಪಿ ಚುನಾವಣಾ ಪ್ರಚಾರಕ್ಕೆ ಕಾರ್ಯಾಲಯ ಉದ್ಘಾಟನೆ

06:35 AM Mar 18, 2019 | Team Udayavani |

ಬೆಂಗಳೂರು: ಮೋದಿಯವರನ್ನು ಮತ್ತೂಮ್ಮೆ ಪ್ರಧಾನಿಯಾಗಿಸಲು ಕರ್ನಾಟಕದಿಂದ ಬಿಜೆಪಿಯ ಹೆಚ್ಚು ಸಂಸದರನ್ನು ಗೆಲ್ಲಿಸಬೇಕು. ಇದಕ್ಕಾಗಿ ಕೇಂದ್ರ ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕು ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿಯ ನಿಯೋಜಿತ ಅಭ್ಯರ್ಥಿ ತೇಜಸ್ವಿನಿ ಅನಂತಕುಮಾರ್‌ ಹೇಳಿದರು.

Advertisement

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಚಾರದ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ 21 ವರ್ಷದಿಂದ ಸಾಮಾಜಿಕ ಕಾರ್ಯದಲ್ಲಿ ಸಕ್ರಿಯವಾಗಿದ್ದೇನೆ. ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌, ಶಾಸಕರಾದ ವಿ.ಸೋಮಣ್ಣ, ಸತೀಶ್‌ ರೆಡ್ಡಿ, ರವಿಸುಬ್ರಹ್ಮಣ್ಯ ಸಹಿತವಾಗಿ ಬಿಜೆಪಿ ಮುಖಂಡರು ಚರ್ಚಿಸಿ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ ಎಂದರು.

ಪ್ರಧಾನಿ ಮೋದಿಯವರು ಮತ್ತೂಮ್ಮೆ ಅಧಿಕಾರಕ್ಕೆ ಬರಬೇಕು. ಇದಕ್ಕಾಗಿ ಬೆಂಗಳೂರಿನ ಮೂರು ಕ್ಷೇತ್ರ ಸಹಿತವಾಗಿ ರಾಜ್ಯದ ವಿವಿಧ ಕ್ಷೇತ್ರಗಳಿಂದ ಹೆಚ್ಚು ಬಿಜೆಪಿ ಸಂಸದರನ್ನು ಆಯ್ಕೆ ಮಾಡಬೇಕು. ಕೇಂದ್ರ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು. ಶಾಸಕ ವಿ.ಸೋಮಣ್ಣ ಮಾತನಾಡಿ, ದಿ.ಅನಂತಕುಮಾರ್‌ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದೆವು.

ಅವರು ಮಾಡಿರುವ ಕಾರ್ಯ ಸದಾ ಸ್ಮರಣೀಯ. ಮೆಟ್ರೋ ಸಹಿತವಾಗಿ ಯಾವುದೇ ಅನುದಾನವನ್ನು ಬೆಂಗಳೂರಿನ ತಂದರೂ ಪಕ್ಷಪಾತವಿಲ್ಲದೇ ಹಂಚಿಕೆ ಮಾಡುತ್ತಿದ್ದರು. ಅವರಿಗೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಈ ಹಿಂದೆ ಎಷ್ಟು ಮತಗಳು ಸಿಗುತ್ತಿದ್ದವೋ ಅದಕ್ಕಿಂತ ದುಪ್ಪಟ್ಟು ಮತವನ್ನು ಈ ಬಾರಿ ಕೊಡಿಸುತ್ತೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next