Advertisement

ಸುಯತೀಂದ್ರ ತೀರ್ಥರ ಆರಾಧನೆಗೆ ಚಾಲನೆ

11:03 AM Mar 25, 2019 | Lakshmi GovindaRaju |

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಹಿಂದಿನ ಪೀಠಾಧಿ ಪತಿ ಶ್ರೀ ಸುಯತೀಂದ್ರ ತೀರ್ಥರ ಆರನೇ ಮಹಾಸಮಾರಾಧನೆಗೆ ಭಾನುವಾರ ಚಾಲನೆ ನೀಡಲಾಯಿತು.

Advertisement

ಬೆಳಗ್ಗೆ ಶ್ರೀ ಸುಯತೀಂದ್ರ ತೀರ್ಥರ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ಮಾಡಲಾಯಿತು. ಬೃಂದಾವನಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.

ಶ್ರೀಮಠದ ಪೀಠಾಧಿಪತಿ ಶ್ರೀ ಸಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ ವಿವಿಧ ಪಂಡಿತರಿಂದ ಪ್ರವಚನ ಕಾರ್ಯಕ್ರಮ ಹಾಗೂ ಯಜ್ಞಮಂಟಪದಲ್ಲಿ ದಾಸ ಸಾಹಿತ್ಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.

ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಮಠದ ವಿದ್ವಾಂಸರು, ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next