Advertisement

ಐಟಿ ದಾಳಿ ಹಿಂದೆ ಕೇಂದ್ರದ ಕೈವಾಡ:ದಿನೇಶ್‌ ಗುಂಡೂರಾವ್‌

11:38 AM Aug 04, 2017 | Team Udayavani |

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿರುವುದರ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇದೆ ಎಂದು ಆರೋಪಿಸಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿತು.

Advertisement

ಬೆಂಗಳೂರು ನಗರ ಘಟಕ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ದೇಶದಲ್ಲಿ ವಿರೋಧ ಪಕ್ಷಗಳೇ ಇರಬಾರದು ಎನ್ನುವುದು ಬಿಜೆಪಿ ಅಜೆಂಡಾ ಆಗಿದೆ. ದೇಶವನ್ನು ಕೇಸರಿಕರಣ ಮಾಡಲು ಸಂಘ ಪರಿವಾರದ ಸಿದ್ಧಾಂತವನ್ನು ದೇಶದ ಮೇಲೆ ಹೇರುವ ಪ್ರಯತ್ನ ನಡೆಯುತ್ತಿದೆ. ದೇಶದ ಐಕ್ಯತೆ ಮತ್ತು ಜಾತ್ಯತೀತತೆ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲ ಎಂದು ಆರೋಪಿಸಿದರು. ದೇಶದಲ್ಲಿ ಸಾಮಾನ್ಯ ಜನರಿಗೆ ಅನುಕೂಲವಾಗುವ ಯಾವ ಯೋಜನೆಯನ್ನೂ ಕೇಂದ್ರ ಸರ್ಕಾರ ನೀಡಿಲ್ಲ. ನೋಟು ರದ್ದತಿ ಬಳಿಕ ಭ್ರಷ್ಟಾಚಾರ ಇರುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗ ಬಿಜೆಪಿಯವರೇ ಬೇರೆ
ಪಕ್ಷಗಳ ಶಾಸಕರನ್ನು ಖರೀದಿ ಮಾಡುವ ಮೂಲಕ ದೊಡ್ಡ ಭ್ರಷ್ಟಾಚಾರಿಗಳಾಗಿದ್ದಾರೆ. ಪ್ರಧಾನಿ ವಿರುದ್ಧ ಮಾತನಾಡಿದರೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತದೆ. ಅವರ ವಿರುದ್ಧ ಸುದ್ದಿ ಮಾಡುವ ಮಾಧ್ಯಮಗಳಿಗೆ ನೋಟಿಸ್‌ ನೀಡಲಾಗುತ್ತಿದೆ. ಇಡೀ ದೇಶವನ್ನು ಮೋದಿ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ಹೊರಟಿದ್ದಾರೆ ಎಂದು ದೂರಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಖಚಿತ . ಹೀಗಾಗಿ ಷಡ್ಯಂತ್ರ ರೂಪಿಸಲಾಗುತ್ತಿದೆ. ಹಿಂದೆಯೂ ಕಾಂಗ್ರೆಸ್‌ ನಾಯಕರ ಮೇಲೆ ಐಟಿ ದಾಳಿ ನಡೆಸಿದಾಗ ಏನೂ ಸಿಕ್ಕಿ ರಲಿಲ್ಲ. ಆದರೂ ದೊಡ್ಡ ಸುದ್ದಿ ಮಾಡುವುದು ಜೆಪಿಯವರ ತಂತ್ರ ಎಂದರು.

ಮಾತಿನಿಂದ ಹೊಟ್ಟೆ ತುಂಬದು

ಇದೇ ವೇಳೆ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌, “ಮನ್‌ ಕಿ ಬಾತ್‌ ನಿಂದ ಜನತೆಯ ಹೊಟ್ಟೆ ತುಂಬುವುದಿಲ್ಲ. ಇದನ್ನೇ ಹೇಳಿ ಕೊಂಡು ಮೂರು ವರ್ಷ ಕಳೆದಿದ್ದೀರಿ. ದಾಳಿ ಮಾಡುವ ಅಧಿಕಾರ ಐಟಿ ಅಧಿಕಾರಿಗಳಿಗಿದೆ. ಆದರೆ, ಡಿ.ಕೆ.ಶಿವಕುಮಾರ್‌ ಮೇಲಿನ ದಾಳಿ ರಾಜಕೀಯ ಪ್ರೇರಿತ. ರಾಷ್ಟ್ರೀಯ ಮಾಧ್ಯಮಗಳು ಮಾಧ್ಯಮ ಧರ್ಮವನ್ನು ಮರೆತಿವೆ. ನಮಗೆ ಜನರ ಬೆಂಬಲ ಇದೆ ಹೋರಾಟ ನಡೆಸುತ್ತೇವೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next