Advertisement

ಜಂತಕಲ್‌ ಪ್ರಕರಣ ಎಚ್‌ಡಿಕೆ 2 ವಾರ ನಿರಾಳ

07:40 AM Jul 28, 2017 | Team Udayavani |

ಬೆಂಗಳೂರು: ಜಂತಕಲ್‌ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನಿನ ಮಧ್ಯಂತರ ಅವಧಿಯನ್ನು ಮುಂದಿನ ವಿಚಾರಣೆಯವರೆಗೆ ಹೈಕೋರ್ಟ್‌ ವಿಸ್ತರಿಸಿದೆ. ಈ ಕುರಿತು ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾ.ರತ್ನಕಲಾ ಅವರಿದ್ದ ಏಕಸದಸ್ಯ ಪೀಠ, ಗುರುವಾರ ಕೈಗೆತ್ತಿಕೊಂಡು ಈ ಮಧ್ಯಂತರ ಆದೇಶ ನೀಡಿದೆ.

Advertisement

ವಿಚಾರಣೆ ವೇಳೆ ಎಸ್‌ಐಟಿ ಪರ ವಿಶೇಷ ಅಭಿಯೋಜಕ ಪಿ. ಗೋವಿಂದನ್‌ ವಾದಿಸಿ, ಅರ್ಜಿದಾರರು ಪ್ರಕರಣದ
ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. 

ಈ ಪ್ರಕರಣ ಸಂಬಂಧ ಅವರನ್ನು ವಿಚಾರಣೆಗೊಳಪಡಿಸಲೇಬೇಕಿದೆ ಹೀಗಾಗಿ, ಜಾಮೀನು ನೀಡಬಾರದು ನ್ಯಾಯಪೀಠಕ್ಕೆ ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ತಡೆಯಾಜ್ಞೆ ಸಂಬಂಧ ಸುಪ್ರೀಂಕೋರ್ಟ್‌ ನೀಡಿರುವ ಆದೇಶವನ್ನು ನ್ಯಾಯಪೀಠಕ್ಕೆ ಸಲ್ಲಿಸಿ ಎಂದು ಕುಮಾರಸ್ವಾಮಿ ಪರ ವಕೀಲರಿಗೆ ಸೂಚನೆ ನೀಡಿತು. ಜತೆಗೆ ಅರ್ಜಿದಾರರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಮುಂದಿನ ಎರಡು ವಾರಗಳಿಗೆ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next