Advertisement

ಜೆಡಿಎಸ್‌ ಕಾನೂನು ಘಟಕ ಪುನರ್‌ರಚನೆಗೆ ತೀರ್ಮಾನ

06:05 AM Sep 16, 2017 | Team Udayavani |

ಬೆಂಗಳೂರು: ಜೆಡಿಎಸ್‌ ಕಾನೂನು ಘಟಕದ ಜಿಲ್ಲಾ ಮತ್ತು ತಾಲೂಕು ಘಟಕಗಳನ್ನು ಪುನರ್‌ರಚಿಸಿ ಭ್ರಷ್ಟಾಚಾರದ ಬಗ್ಗೆ ವ್ಯಾಪಕ ಹೋರಾಟ ನಡೆಸುವುದು ಹಾಗೂ ಪಕ್ಷ ಸಂಘಟನೆಗಾಗಿ ಕಾರ್ಯಕ್ರಮ ರೂಪಿಸಲು ತೀರ್ಮಾನಿಸಲಾಗಿದೆ.

Advertisement

ಜೆಡಿಎಸ್‌ ಕಚೇರಿಯಲ್ಲಿ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ, ಕಾನೂನು ಘಟಕದ ಜಿಲ್ಲಾ ಮತ್ತು ತಾಲೂಕು ಘಟಕ ಪುನರ್‌ರಚಿಸಿ ಯುವಕರಿಗೆ ಹೆಚ್ಚು ಅವಕಾಶ ನೀಡಲು ನಿರ್ಧರಿಸಲಾಯಿತು. ಜತೆಗೆ ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಂಘಟನೆ ಮಾಡಲು ಕಾನೂನು ಘಟಕ ಕಾರ್ಯಕ್ರಮ ರೂಪಿಸಲು ನಿರ್ಣಯ ಕೈಗೊಳ್ಳಲಾಯಿತು.

ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಎ.ಪಿ.ರಂಗನಾಥ್‌, ಜೆಡಿಎಸ್‌ ಕಾನೂನು ಘಟಕದ ವತಿಯಿಂದ ಹಲವಾರು ಹೋರಾಟ ರೂಪಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ವಕೀಲರು ನ್ಯಾಯಾಂಗದ ಒಂದು ಭಾಗವಾಗಿದ್ದು ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ, ಅವರಿಗೆ ಮೂಲಸೌಕರ್ಯಗಳು ಇಲ್ಲ ಎಂದು ಹೇಳಿದರು. ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲು ಹಾಗೂ ಬಾರ್‌ ಕೌನ್ಸಿಲ್‌ನಿಂದ ವಕೀಲರಿಗೆ ನೀಡುವ ವೆಲ್‌ಫೇರ್‌ ಫ‌ಂಡ್‌ನ‌ಲ್ಲಿ ಯುವಕರಿಗೆ ಮತ್ತು ಹಿರಿಯರಿಗೆ ವ್ಯತ್ಯಾಸವಿಲ್ಲದೆ ಸಮಾನವಾಗಿ ನೀಡಬೇಕು. ಸರ್ಕಾರ  ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು.

ಬಿಬಿಎಂಪಿಯ 109 ವಾರ್ಡ್‌ಗಳಲ್ಲಿ 2008 ರಿಂದ ನಡೆದಿರುವ ಅವ್ಯವಹಾರಗಳ ಬಗ್ಗೆ ಕಾನೂನು ಘಟಕ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next