Advertisement

ಗಣಿ ಸ್ಫೋಟಕ್ಕೆ ಜಿಲ್ಲಾಡಳಿತವೇ ಹೊಣೆ

05:07 PM Feb 02, 2021 | Team Udayavani |

ವಿಧಾನಸಭೆ: ಹುಣಸೋಡು ಸ್ಫೋಟ ಪ್ರಕರಣಕ್ಕೆ ಜಿಲ್ಲಾಡಳಿ ತವೇ ಹೊಣೆ. ತಪ್ಪಿತಸ್ಥ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

Advertisement

ಹುಣಸೋಡು ಸ್ಫೋಟ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿ, ಆಯನೂರು ಮಂಜುನಾಥ್‌ ಅವರ ಹೇಳಿಕೆ ಗಂಭೀರವಾಗಿದೆ. ರಾಜಕಾರಣಿಗಳು ಅಕ್ರಮ ಕಲ್ಲು ಗಣಿಗಾರಿಕೆ ಹಿಂದಿದ್ದಾರೆ. ಆ ಕಾಣದ ಕೈಗಳು ಯಾವುದು ಎಂಬುದು ಬಯಲಾಗಬೇಕು ಎಂದು ಒತ್ತಾಯಿಸಿದರು.

ಹತ್ತಾರು ವರ್ಷಗಳಿಂದ ಅಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ, ಕ್ರಷರ್‌ ಕಾರ್ಯಾಚರಣೆ ಮಾಡುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರು ಪ್ರತಿನಿಧಿಸುವ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 2 ಸಾವಿರಕ್ಕೂ ಹೆಚ್ಚು ಅಕ್ರಮ ಕಲ್ಲು ಗಣಿಗಾರಿಕೆ, ಕ್ರಷರ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಯಾವುದೇ ಕಾರಣಕ್ಕೂ ಅಕ್ರಮವಾಗಿರುವುದನ್ನು ಸಕ್ರಮ ಮಾಡಬಾರದು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next