Advertisement

‘ದಿ ಕಾಶ್ಮೀರ್ ಫೈಲ್ಸ್’ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ‘ವೈ’ಕೆಟಗರಿ ಭದ್ರತೆ

02:04 PM Mar 18, 2022 | Team Udayavani |

ಹೊಸದಿಲ್ಲಿ: ಕೇಂದ್ರ ಸರ್ಕಾರವು `ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಸಿಆರ್‌ಪಿಎಫ್ ಭದ್ರತೆಯೊಂದಿಗೆ `ವೈ’ ಕೆಟಗರಿ ಭದ್ರತೆಯನ್ನು ನೀಡಿದೆ ಎಂದು ಸರ್ಕಾರಿ ಮೂಲಗಳು ಶುಕ್ರವಾರ ತಿಳಿಸಿವೆ.

Advertisement

ಕಾಶ್ಮೀರಿ ಪಂಡಿತರ ವಲಸೆ ಕುರಿತಾದ ಕಾಶ್ಮೀರ ಫೈಲ್ಸ್’ ಚಿತ್ರವು ಮಾರ್ಚ್ 11 ರಂದು ಬಿಡುಗಡೆಯಾಗಿತ್ತು. ಚಿತ್ರವು ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಸತ್ಯವನ್ನು ಸರಿಯಾದ ರೀತಿಯಲ್ಲಿ ಹೊರತರಲಾಗುತ್ತಿದೆ ಎಂದು ಪ್ರಧಾನಿ ಹೇಳಿದ್ದರು.

ಇದನ್ನೂ ಓದಿ:ಮಂಗಳೂರು: “ಮಗನೇ ಮಹಿಷ” ಸಿನಿಮಾದ ಆಡಿಯೋ ಬಿಡುಗಡೆಗೊಳಿಸಿದ ಮನೋಮೂರ್ತಿ

ಮತ್ತೊಂದೆಡೆ, ವಿರೋಧ ಪಕ್ಷಗಳು ಚಿತ್ರವು “ಅರ್ಧ ಸತ್ಯ” ತೋರಿಸಿದೆ ಎಂದು ಟೀಕಿಸುತ್ತಿವೆ.

Advertisement

ಕಾಶ್ಮೀರ ಪಂಡಿತರ ಮೇಲೆ ನಡೆದಿದ್ದ ದೌರ್ಜನ್ಯದ ಕುರಿತು ಕಾಶ್ಮೀರ ಫೈಲ್ಸ್ ಚಿತ್ರದಲ್ಲಿ ತೋರಿಸಲಾಗಿದೆ. ಚಿತ್ರವನ್ನು ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ್ದಾರೆ.

ಮಾರ್ಚ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ದರ್ಶನ್ ಕುಮಾರ್ ಮತ್ತು ಇತರರು ನಟಿಸಿದ್ದಾರೆ.

ಉತ್ತರ ಪ್ರದೇಶ, ಕರ್ನಾಟಕ, ತ್ರಿಪುರಾ, ಗೋವಾ, ಹರಿಯಾಣ, ಗುಜರಾತ್ ಮತ್ತು ಉತ್ತರಾಖಂಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಲಾಗಿದೆ ಎಂದು ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next