Advertisement

ಯುಪಿ ಸಿಎಂ ಯೋಗಿ ಭೇಟಿ ಮಾಡಿದ ‘ದಿ ಕೇರಳ ಸ್ಟೋರಿ’ ತಂಡ

10:27 PM May 11, 2023 | Team Udayavani |

ಲಕ್ನೋ: ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸು ಕಾಣುತ್ತಿರುವ ದಿ ಕೇರಳ ಸ್ಟೋರಿ ಚಿತ್ರ ತಂಡ ಲಕ್ನೋದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.

Advertisement

ಸುದೀಪ್ತೋ ಸೇನ್ ನಿರ್ದೇಶನದ ಈ ಚಿತ್ರದಲ್ಲಿ ಅದಾ ಶರ್ಮಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೇರಳ ಸ್ಟೋರಿ ನಿರ್ಮಾಪಕರು ಮತ್ತು ಅದರ ನಾಯಕಿ ನಟಿ ಅದಾ ಶರ್ಮಾ ಅವರನ್ನು ಅಭಿನಂದಿಸಿದರು ಚಿತ್ರತಂಡದೊಂದಿಗೆ ಸಂವಾದ ನಡೆಸಿದರು ಮತ್ತು ಫೋಟೋಗಳಿಗೆ ಪೋಸ್ ನೀಡಿದರು.

ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ವಿಪುಲ್ ಶಾ ಅವರು, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಚಿತ್ರಕ್ಕೆ ರಾಜ್ಯದಲ್ಲಿ ಟ್ಯಾಕ್ಸ್ ಫ್ರೀ ಮಾಡುವುದಾಗಿ ಘೋಷಿಸಿದ್ದಾರೆ.ಈ ಕ್ರಮವನ್ನು ತೆಗೆದುಕೊಂಡು ನಮ್ಮ ನೈತಿಕತೆಯನ್ನು ಹೆಚ್ಚಿಸಿದ್ದಾರೆ. ನಮ್ಮ ಚಿಂತನೆಯನ್ನು ಬಲಪಡಿಸಿದ್ದಾರೆ. ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಚಿತ್ರವನ್ನು ವೀಕ್ಷಿಸುತ್ತಿರುವ ಕಾರಣ ಅವರು ಜನರಿಗೆ ಅತ್ಯಂತ ಶಕ್ತಿಯುತ ಸಂದೇಶವನ್ನು ಕಳುಹಿಸಿದ್ದಾರೆ. ಆದ್ದರಿಂದ ನಾವು ಸಿಎಂಗೆ ತುಂಬಾ ಕೃತಜ್ಞರಾಗಿರುತ್ತೇವೆ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next