Advertisement

ಬಿಜೆಪಿಯಿಂದ ಕೋಲಿ ಸಮುದಾಯಕ್ಕೆ ಅನ್ಯಾಯವಾಗಿಲ್ಲ; ಚಿಂಚನಸೂರ

06:21 PM Jan 22, 2021 | Team Udayavani |

ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸರ್ಕಾರದಲ್ಲಿ ಎಲ್ಲಾ ಸಮುದಾಯಕ್ಕೆ ನ್ಯಾಯ ಕೊಟ್ಟಿದ್ದಾರೆ. ನಾನು ಗೆದ್ದಿದ್ದರೇ ಮಂತ್ರಿಯಾಗುತ್ತಿದ್ದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಹೇಳಿದರು.

Advertisement

ಜಿಲ್ಲಾಡಳಿತದಿಂದ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋಲಿ ಸಮಾಜಕ್ಕೆ ಬಿಜೆಪಿ ಅನ್ಯಾಯ ಮಾಡಿಲ್ಲ. ಕೋಲಿ ಸಮಾಜಕ್ಕೆ ಸಂಪುಟದಲ್ಲಿ ಸ್ಥಾನಮಾನ ಸಿಗದಿರುವುದಕ್ಕೆ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಾಧಕ ಬಾಧಕಗಳನ್ನು ಗಮನಿಸಿ ಎಲ್ಲಾ ನಿರ್ಧಾರ ಮಾಡುತ್ತದೆ. ಯಡಿಯೂರಪ್ಪ ಸಿಎಂ ಆದ ತಕ್ಷಣ ತನಗೆ ನಿಗಮದ ಅಧ್ಯಕ್ಷ ಸ್ಥಾನ ನೀಡಿದ್ದಾಗಿ ಬಿಎಸ್‌ವೈ
ನಡೆಯನ್ನು ಸಮರ್ಥಿಸಿಕೊಂಡರು.

ಅಲ್ಲದೆ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ವಿಚಾರವಾಗಿ ಮುಖ್ಯಮಂತ್ರಿ ಸಹಕಾರದಿಂದ ಪ್ರಯತ್ನಿಸಲಾಗುವುದು ಎಂದರು. ನಾವು ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಡಾ| ಉಮೇಶ ಜಾಧವ ಅವರು ಐತಿಹಾಸಿಕ ಗೆಲುವು ಸಾಧಿ ಸಲು ಶ್ರಮಿಸಿದ್ದೇವೆ. ಕಾಂಗ್ರೆಸ್‌ ನಲ್ಲಿದ್ದಾಗ ತಮ್ಮವರೇ ನನ್ನ ಸೋಲಿಸಿದ್ದಾರೆ. ಸೋಲಿಗೆ ಕಾರಣ ಯಾರು ಎಂಬುದನ್ನು ಸಮಯ ಬಂದಾಗ ಹೇಳುವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next