Advertisement
ನೀರಿನ ಮೂಲ: ತಾಲೂಕಿನಲ್ಲಿ ಯಾವುದೇ ನದಿ ಮೂಲಗಳಿಲ್ಲ. ಶಾಶ್ವತ ನೀರಾವರಿ ಯೋಜನೆಗಳಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತರ್ಜಲ ಸ್ಥಿತಿಗತಿ ತೀರಾ ಚಿಂತಾಜನಕವಾಗಿದೆ. ನಗರದ ಸುತ್ತಮುತ್ತಲಿನ ಗ್ರಾಮಗಳ ಹಾಗೂ ನಗರಕ್ಕೆ ಹೊಂದಿಕೊಂಡಂತಿರುವ ಪ್ರದೇಶಗಳಲ್ಲಿನ ಬೋರ್ವೆಲ್ಗಳೇ ನೀರಿಗೆ ಆಧಾರವಾಗಿವೆ. ಅಂಕಿಅಂಶ ಗಳ ಪ್ರ ಕಾ ರ ಜಿ ಲ್ಲೆಯ ದೊಡ್ಡಬಳ್ಳಾಪುರದಲ್ಲಿ 9,467, ದೇವನಹಳ್ಳಿಯಲ್ಲಿ 11,170, ಹೊಸಕೋಟೆಯಲ್ಲಿ 9,308 ಹಾಗೂ ನೆಲಮಂಗಲದಲ್ಲಿ 5,077 ಸೇರಿ ಒಟ್ಟು 35,022 ಕೊ ಳವೆ ಬಾ ವಿ ಗ ಳಿವೆ.
Related Articles
Advertisement
ಜಕ್ಕಲಮಡಗು ಜಲಾಶಯದಿಂದ ನಗರಕ್ಕೆ ಪ್ರತಿದಿನ 10.00ಲಕ್ಷ ಲೀ. ನೀರು ಸರಬರಾಜು ಆಗುತ್ತಿದೆ. ಮಾ ರ್ಚ್ 19 ರವರೆಗೆ ಜಕ್ಕಲಮಡಗು ಜಲಾಶಯದಲ್ಲಿ ಶೇಖರಣೆಯಾಗಿರುವ ನೀರಿನ ಮಟ್ಟ 8 ಅಡಿಗಳಿದೆ. ದೊಡ್ಡಬಳ್ಳಾಪುರ ನಗರಕ್ಕೆ ಪ್ರತಿದಿನ 1.0ದಶಲಕ್ಷ ಲೀ. ನೀರನ್ನು ಸರಬರಾಜು ಮಾಡಿಕೊಳ್ಳಲಾಗುತ್ತದೆ. ಅದರಂತೆ ನಗರಕ್ಕೆ ಹಾಲಿ ಇರುವ ಜಲಾಶಯದಲ್ಲಿ ಸುಮಾರು 15ದಿನಗಳ ವರೆಗೆ ಮಾತ್ರ ನೀರು ಸರಬರಾಜು ಆಗಲಿದೆ.
2017-18ನೇ ಸಾಲಿನ ಎಸ್ಎಫ್ಸಿ ಅನುದಾನದಡಿ ಈಗಾಗಲೇ 14ಸಂಖ್ಯೆ ಕೊಳವೆಬಾವಿಗಳನ್ನು ಕೊರೆಸಲಾಗಿದ್ದು, ಇದರಲ್ಲಿ 4 ವಿಫಲಗೊಂಡಿದ್ದು, ಉಳಿದ 10 ಕೊಳವೆಬಾವಿಗಳಲ್ಲಿ ನೀರು ಸರಬರಾಜು ಮಾಡಿಕೊಳ್ಳಲಾಗುತ್ತಿದೆ. 2018-19ನೇ ಸಾಲಿನ ಎಸ್ಎಫ್ಸಿ ಅನುದಾನದಡಿ 25 ಲಕ್ಷ ರೂ. ಬಿಡುಗಡೆ ಮಾಡಿದ್ದು, ಈ ಮೊತ್ತದಲ್ಲಿ ಬೇಸಿಗೆ ಕಾಲದಲ್ಲಿ ಅವಶ್ಯಕತೆಗನುಗುಣವಾಗಿ 12ಸಂಖ್ಯೆ ಕೊಳವೆಬಾವಿಗಳನ್ನು ಕೊರೆಯಲು ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ ಎನ್ನುತ್ತಾರೆ ನೀರು ಸರಬರಾಜು ವಿಭಾಗದ ಕಿರಿಯ ಅಭಿಯಂತರ ರಾಮೇಗೌಡ.
ಗ್ರಾಮಾಂತರ ಪ್ರದೇಶ: ಗ್ರಾಮಾಂತರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಕಾಡುತ್ತಿದೆ. ಕೆರೆ ಕುಂಟೆಗಳಲ್ಲಿ ಹೂಳು ತಂಬಿಕೊಂಡು ನೀರಿನ ಶೇಖರಣೆ ಕಡಿಮೆಯಾಗಿದೆ. ಪ್ರತಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಆದರೆ, ಸೂಕ್ತ ನಿರ್ವಹಣೆ ಇಲ್ಲದೇ ಹಲವಾರು ಘಟಕಗಳು ಮುಚ್ಚಿವೆ. ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಕಾಲಕಾಲಕ್ಕೆ ಕ್ರಿಯಾ ಯೋಜನೆ ರೂಪಿಸಿ, ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗುತ್ತಿದ್ದಾರೆ ಎನ್ನುವ ಆರೋಪಗಳಿವೆ.
ಜಾರಿಯಾಗದ ನೀರಾವರಿ ಯೋಜನೆ: ಸದ್ಯಕ್ಕೆ ಜಕ್ಕಲಮಡುಗುವಿನಿಂದ ನಗರಕ್ಕೆ ನೀರು ಸರಬರಾಜಾಗುತ್ತಿರುವುದರಿಂದ ಪರಿಸ್ಥಿತಿ ತಿಳಿಯಾಗಿದೆ. ಬಯಲುಸೀಮೆಯಲ್ಲಿ ಮಳೆ ಕಡಿಮೆ. ಅಂತರ್ಜಲ ಬತ್ತಿದೆ. ಕೆರೆ, ಕುಂಟೆಗಳು ಭರ್ತಿಯಾಗಿ ಅಂತರ್ಜಲ ವೃದ್ಧಿಯಾಗದೇ ಸಮಸ್ಯೆ ಬಗೆಹರಿಯುವುದಿಲ್ಲ. ಈ ನಿಟ್ಟಿನಲ್ಲಿ ಶಾಶ್ವತ ನೀರಾವರಿಗಾಗಿ ಪರಮಶಿವಯ್ಯನವರ ವರದಿ ಜಾರಿಗೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕಿದೆ ಎನ್ನುವ ಒತ್ತಾಯಗಳು ಕೇಳಿಬರುತ್ತಿವೆ.
* ಡಿ.ಶ್ರೀಕಾಂತ್