Advertisement

ಕಿಡಿಗೇಡಿಗಳ ಬಂಧನಕ್ಕೆ ಯುವ ವೇದಿಕೆ ಆಗ್ರಹ

09:46 AM Jun 25, 2022 | Team Udayavani |

ಚಿತ್ತಾಪುರ: ಪಟ್ಟಣದಲ್ಲಿ ಹಾಡುಹಗಲೇ ಬಸವೇಶ್ವರ ಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಮಾಡಿ ಬಂಧಿಸಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯಿತ ಯುವ ವೇದಿಕೆ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ಮುಖಂಡರು ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.

Advertisement

ವೇದಿಕೆ ಜಿಲ್ಲಾಧ್ಯಕ್ಷ ದಯಾನಂದ ಪಾಟೀಲ ಮಾತನಾಡಿ, ಬಸವೇಶ್ವರ ಮೂರ್ತಿ ಮುಖಕ್ಕೆ ಕಪ್ಪು ಮತ್ತು ಕೆಂಪು ಬಟ್ಟೆ ಕಟ್ಟಿ ಅವಮಾನಿಸಿದ ಕೃತ್ಯವನ್ನು ಕಟುವಾಗಿ ಖಂಡಿಸಲಾಗುವುದು ಎಂದು ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸ್‌ ಅಧಿಕಾರಿಗಳು ಬಂಧಿಸಿದ್ದು, ಇನ್ನುಳಿದ ಕಿಡಿಕೇಡಿಗಳನ್ನು ತಕ್ಷಣವೇ ಬಂಧಿಸಿ ಅವರನ್ನು ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಕಾನೂನು ಸುವ್ಯವಸ್ಥೆ ಕದಡಿಸಿದವರನ್ನು ಉತ್ತರ ಪ್ರದೇಶ ಮಾದರಿಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರಾಜ್ಯವ್ಯಾಪಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ವೇದಿಕೆ ರಾಜ್ಯ ಸಮಿತಿ ಸದಸ್ಯ ಶ್ರೀಧರ ನಾಗನಹಳ್ಳಿ, ಪ್ರಧಾನ ಕಾರ್ಯದರ್ಶಿ ಸುನೀಲ ಮಹಾಗಾಂವಕರ್‌, ಜಿಲ್ಲಾ ಸಂಚಾಲಕರಾದ ಸತೀಶ ಮಾಹೂರ, ಅವಿನಾಶ ಅರಳಿ, ಗುರುರಾಜ ಅಂಬಾಡಿ, ಮಲ್ಲಿಕಾರ್ಜುನ ಕೊಂಡದ್‌, ತಾಲೂಕು ಅಧ್ಯಕ್ಷ ಮಹೇಶ ಬಾಳಿ, ಮುಖಂಡರಾದ ಗುರುರಾಜ ಸುಂಟನೂರ, ನಾಗರೆಡ್ಡಿ ಗೋಪಸೇನ್‌, ಆನಂದ ಪಾಟೀಲ ನರಬೋಳ, ಶಂಭು ದಿಗ್ಗಾಂವ, ಮಲ್ಲಿನಾಥ ಅವಂಟಿ, ಹನುಮಾನ ವ್ಯಾಸ್‌, ರವಿ ಪಡ್ಲಾ ಹಾಗೂ ಇನ್ನಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next