Advertisement

ಶಾಸಕ ಶ್ರೀಮಂತ ಪಾಟೀಲ ಮನೆಗೆ ಪೊಲೀಸರ ಭೇಟಿ

02:30 AM Jul 19, 2019 | Team Udayavani |

ಚಿಕ್ಕೋಡಿ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅವರ ಅಪಹರಣ ಆರೋಪದ ಹಿನ್ನೆಲೆಯಲ್ಲಿ ಗೃಹ ಇಲಾಖೆ ಸೂಚನೆ ಮೇರೆಗೆ ಅಥಣಿ ಡಿವೈಎಸ್‌ಪಿ ರಾಮಣ್ಣ ಬಸರಗಿ ನೇತೃತ್ವದ ಪೊಲೀಸರ ತಂಡ ಮಹಾರಾಷ್ಟ್ರದ ಸಾಂಗ್ಲಿಯಲ್ಲಿರುವ ಶ್ರೀಮಂತ ಪಾಟೀಲ ಮನೆಗೆ ತೆರಳಿ ಮಾಹಿತಿ ಕಲೆ ಹಾಕಿತು.

Advertisement

ವಿಶ್ವಾಸಮತ ಯಾಚನೆ ಕುರಿತು ಚರ್ಚೆ ಮಾಡುವ ಸಂದರ್ಭದಲ್ಲಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಆರೋಗ್ಯವಾಗಿದ್ದಾರೆ. ಆದರೆ, ಅವರನ್ನು ಅನಾರೋಗ್ಯದ ನೆಪವೊಡ್ಡಿ ಬಿಜೆಪಿಯವರು ಅಪಹರಣ ಮಾಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಆರೋಪ ಮಾಡಿದ್ದರು. ಈ ಹಿನ್ನೆಲ್ಲೆಯಲ್ಲಿ ಸ್ಪೀಕರ್‌ ರಮೇಶ ಕುಮಾರ್‌ ಅವರು, ಗೃಹ ಇಲಾಖೆಗೆ ಸೂಚನೆ ನೀಡಿದ್ದರು. ಹೀಗಾಗಿ, ಅಥಣಿ ಪೊಲೀಸರು ಸಾಂಗ್ಲಿಯಲ್ಲಿರುವ ಶ್ರೀಮಂತ ಪಾಟೀಲ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಪತ್ನಿ, ಪುತ್ರ ಹಾಗೂ ಕುಟುಂಬ ಸದಸ್ಯರೊಂದಿಗೆ ಶಾಸಕರು ಮುಂಬೈಗೆ ತೆರಳಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಶ್ರೀಮಂತ ಪಾಟೀಲ ಅವರಿಗೆ ಹೃದಯ ಕಾಯಿಲೆಯಿದ್ದು, ಚಿಕಿತ್ಸೆಗಾಗಿ ಮುಂಬೈಗೆ ತೆರಳಿದ್ದಾರೆ ಎಂದು ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಚಿಕ್ಕೋಡಿ ಎಎಸ್‌ಪಿ ಜಿ.ಕೆ.ಮಿಥುನಕುಮಾರ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next