Advertisement

ಶ್ರವಣಬೆಳಗೊಳದಲ್ಲಿ ಬೋನಿಗೆ ಬಿದ್ದ ಚಿರತೆ 

06:40 AM Jan 25, 2018 | Team Udayavani |

ಶ್ರವಣಬೆಳಗೊಳ: ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ವಿಂಧ್ಯಗಿರಿ ಹಾಗೂ ಚಂದ್ರಗಿರಿ ಬೆಟ್ಟದಲ್ಲಿ ಅರಣ್ಯ ಇಲಾಖೆಯಿಂದ ಚಿರತೆ ಹಿಡಿಯಲು ಬೋನು ಇರಿಸಿದ್ದ ಪರಿಣಾಮ ಬುಧವಾರ ಬೆಳಗಿನ ಜಾವ ಹೆಣ್ಣು ಚಿರತೆ
ಬಂಧಿಯಾಗಿದೆ.

Advertisement

ಇತ್ತೀಚೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬೆಟ್ಟಕ್ಕೆ ಭೇಟಿ ನೀಡಿದ ವೇಳೆ ಸಾರ್ವಜನಿಕರು ಚಿರತೆ ವಾಸವಾಗಿರುವ ಬಗ್ಗೆ ತಿಳಿಸಿದ್ದರಿಂದ ವಿಂಧ್ಯಗಿರಿ ಹಾಗೂ ಚಂದ್ರಗಿರಿಗೆ ಚಿರತೆ ಬೋನು ಇಡುವಂತೆ ಅರಣ್ಯ ಇಲಾಖೆಗೆ ತಾಕೀತು ಮಾಡಿದ್ದರು. ಬೋನಿನಲ್ಲಿ ಬಂಧಿಯಾಗಿದ್ದ ಚಿರತೆಯನ್ನು ಬಂಡೀಪುರ ಅಭಯಾರಣ್ಯಕ್ಕೆ ಬಿಡುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next