Advertisement

ಪುತ್ತೂರು: ಬನ್ನೂರು ಹಲಂಗದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಚಿರತೆ

11:38 AM Dec 24, 2020 | Adarsha |

ಪುತ್ತೂರು:  ಬನ್ನೂರು ಹಲಂಗದಲ್ಲಿ ಚಿರತೆಯೊಂದು ಕಾಣಿಸಿ ಕೊಂಡಿರುವುದಾಗಿ ವರದಿಯಾಗಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನಕ್ಕೆ ಧನುಪೂಜೆಗೆ ನಸುಕಿನ ಜಾವ ಭಕ್ತರೊಬ್ಬರು ತೆರಳುತ್ತಿದ್ದ ವೇಳೆ ಅವರಿಗೆ ಚಿರತೆಯೊಂದು ಕಾಣಿಸಿಕೊಂಡಿದೆ.

Advertisement

ಬಳಿಕ ಮಧ್ಯಾಹ್ನ ನಗರಸಭಾ ಮಾಜಿ ಸದಸ್ಯ ಹಲಂಗ ರಾಮಣ್ಣ ಗೌಡರ ಮನೆಯ ಬಳಿಯೂ ಚಿರತೆ ಪ್ರತ್ಯಕ್ಷವಾಗಿದೆ. ಅಲ್ಲದೆ ಈ ಚಿರತೆಯು ನಗರಸಭಾ ಮಾಜಿ ಸದಸ್ಯ ಹಲಂಗ ರಾಮಣ್ಣ ಗೌಡರ ಮನೆಯ ಬಳಿಯಿಂದ ಪಕ್ಕದ ತೆಂಗಿನ ಕೊಪ್ಪಳಕ್ಕೆ ಹೋಗಿದ್ದು, ಅಲ್ಲಿಂದ ಡಂಪಿಂಗ್ ಯಾರ್ಡ್ ಪಕ್ಕದ ಗುಡ್ಡೆಗೆ ಹೋಗಿದೆ ಎನ್ನಲಾಗಿದೆ.

ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ.

ಇದನ್ನೂ ಓದಿ:ಗ್ರಾ.ಪಂ ಚುನಾವಣಾ ಕಣದಲ್ಲಿದ್ದ ಅಭ್ಯರ್ಥಿ ಹೃದಯಾಘಾತದಿಂದ ಸಾವು

Advertisement

Udayavani is now on Telegram. Click here to join our channel and stay updated with the latest news.

Next