Advertisement
ಸೋಮವಾರ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆದ ಪಟ್ಟಾಭಿಷೇಕೋತ್ಸವ ಜೀವ-ಭಾವ ಕಾರ್ಯಕ್ರಮದ ಅಂಗವಾಗಿ “ಶ್ರೀಮಾತಾ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಜೀವನ ಸಮಾಜಮುಖೀಯಾಗಬೇಕು.
Related Articles
Advertisement
ಶ್ರೀಕೃಷ್ಣ ಟ್ರಸ್ಟ್ ಬೆಂಗಳೂರು ಆಡಳಿತ ವ್ಯವಸ್ಥಾಪಕ ಸದಾಶಿವಪ್ಪ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಸಂಸ್ಥೆಯಿಂದ 25 ವರ್ಷಗಳಿಂದ ವಿಕಲಚೇತನ ಶಾಲೆ ಆರಂಭಿಸಿ ಉಚಿತ ಶಿಕ್ಷಣ ವಸತಿಯನ್ನು ನೀಡುತ್ತಿದ್ದೇವೆ. ಶಾಲೆಯಲ್ಲಿ 50 ವಿಕಲಚೇತನ ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ ಎಂದರು. ಮಕ್ಕಳಿಗೆ ಶಿಕ್ಷಣ ನೀಡಿ 18 ವರ್ಷ ತುಂಬಿದ ಬಳಿಕ ಪೋಷಕರ ಜೊತೆ ಕಳಿಸಲಾಗುತ್ತಿತ್ತು. ಆದರೆ, ನಮ್ಮ ಜವಾಬ್ದಾರಿ ಪೂರ್ಣಗೊಳಿಸಿಲ್ಲ ಅನ್ನುವ ನೋವು ಕಾಡುತ್ತಿತ್ತು. ಹಾಗಾಗಿ ಸಂಸ್ಥೆಯಿಂದ ಇನ್ನು ಮುಂದೆ ಮಕ್ಕಳಿಗೆ ವಿವಿಧ ಡಿಪ್ಲೊಮಾ ಕೋರ್ಸ್ಗಳ ತರಬೇತಿ ನೀಡಿ ನಂತರ ಸರ್ಕಾರಿ ಉದ್ಯೋಗ ಪಡೆಯುವಂತೆ ತರಬೇತಿ ನೀಡಿ ಅವರ ಜೀವನ ರೂಪಿಸುವ ಕೆಲಸ ಮಾಡಲಾಗುವುದು ಎಂದರು.
ಕಾರ್ಯಕ್ರಮಕ್ಕೂ ಮುನ್ನ ಧರ್ಮಕರ್ತ ಡಾ| ಜಿ.ಬೀಮೇಶ್ವರ ಜೋಷಿಯವರ ಪಟ್ಟಾಭಿಷೇಕವಾಗಿ 31 ವರ್ಷ ತುಂಬಿದ ದಿನದ ಅಂಗವಾಗಿ ದೇವಿಗೆ ಅಭಿಷೇಕ, ಪೂಜೆ, ನವಗ್ರಹ ಹೋಮಗಳು ನಡೆದವು. ಈ ಸಂದರ್ಭದಲ್ಲಿ ಹೊರನಾಡು ದೇವಸ್ಥಾನದ ಟ್ರಸ್ಟಿಗಳಾದ ರಾಜಲಕ್ಷಿ ಜೋಷಿ, ರಾಮನಾರಾಯಣ ಜೋಷಿ ಇದ್ದರು.