Advertisement

ಸಚಿವ ಪಾಟೀಲರಿಂದ ಲಾಂಛನ ಬಿಡುಗಡೆ

10:19 AM Mar 02, 2018 | Team Udayavani |

ಕಲಬುರಗಿ: ರಾಷ್ಟ್ರಕೂಟರ ರಾಜಧಾನಿ ಮಳಖೇಡದಲ್ಲಿ ಮಾ. 4 ಮತ್ತು 5ರಂದು ಆಚರಿಸಲಾಗುತ್ತಿರುವ ರಾಷ್ಟ್ರಕೂಟ ಉತ್ಸವದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಗುರುವಾರ ಬಿಡುಗಡೆ ಮಾಡಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಾಂಛನ ಅಲ್ಲದೇ ಪ್ರಚಾರಕ್ಕೆ ಬಳಸಲಾಗುವ ಪೋಸ್ಟರ್‌ ಸಹ ಸಚಿವರು ಬಿಡುಗಡೆ ಮಾಡಿದರು.

ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಕೋಲಿ ಸಮಾಜದ ರಾಜ್ಯ ಗೌರವಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ, ಉತ್ಸವದ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next