Advertisement

ಪಂಡಿತಾರಾಧ್ಯ ಶಿವಾಚಾರ್ಯಶ್ರೀ ಕಾರಿಗೆ ಲಾರಿ ಡಿಕ್ಕಿ; ಅಪಾಯದಿಂದ ಪಾರು

04:56 AM Feb 02, 2019 | Team Udayavani |

ಚಿತ್ರದುರ್ಗ:ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಡಾ.ಪಂಡಿತಾರಾಧ್ಯ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರಿಗೆ ಶನಿವಾರ ಬೆಳಗ್ಗೆ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಹೊಳಲ್ಕೆರೆಯ ಚಿಕ್ಕಚಾಜೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಶ್ರೀಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.

Advertisement

 ಪಂಡಿತಾರಾಧ್ಯ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರಿಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಕಾರು ಜಖಂಗೊಂಡಿದೆ. ಆದರೆ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಭಕ್ತರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಮಠದ ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next