Advertisement

ಬಿಜೆಪಿಯಿಂದ ಆಮಿಷ ಬಂದಿದ್ದು ನಿಜ: ಚಿಕ್ಕಮಾದು 

06:30 AM Sep 17, 2018 | Team Udayavani |

ಎಚ್‌.ಡಿ.ಕೋಟೆ: “ನಾನು ಕಷ್ಟದಲ್ಲಿದ್ದಾಗ ಗುರುತಿಸಿ ಅವಕಾಶ ನೀಡಿದ್ದು ಕಾಂಗ್ರೆಸ್‌. ಹೀಗಾಗಿ, ನಾನು ಕಾಂಗ್ರೆಸ್‌
ತೊರೆದು ಬಿಜೆಪಿ ಸೇರುತ್ತೇನೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇದರಲ್ಲಿ ಯಾವುದೇ ಹುರುಳಿಲ್ಲ’ ಎಂದು ಎಚ್‌.ಡಿ.ಕೋಟೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಅನಿಲ್‌ ಚಿಕ್ಕಮಾದು ಸ್ಪಷ್ಟಪಡಿಸಿದ್ದಾರೆ. 

Advertisement

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಬಿಜೆಪಿಯ ಸ್ಥಳೀಯ ನಾಯಕರು, ಮುಖಂಡರು ನನ್ನನ್ನು ಸಂಪರ್ಕಿಸಿ ಆಮಿಷ ಒಡ್ಡಿರುವುದು ನಿಜ. ಹತ್ತು ದಿನಗಳ ಹಿಂದೆ ನನ್ನನ್ನು ನೇರವಾಗಿ ಸಂಪರ್ಕಿಸಿದ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್‌, ಬಿಜೆಪಿ ಸೇರುವಂತೆ ಆಮಿಷವೊಡ್ಡಿದ್ದಾರೆ. ಅಲ್ಲದೆ, ಶಾಸಕ ಸ್ಥಾನಕ್ಕೆ ರಾಜೀನಾಮೆ
ನೀಡಿದರೆ ಮತ್ತೆ ಎಚ್‌.ಡಿ.ಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿ ಗೆಲ್ಲಿಸಿ, ಸಚಿವ ಸ್ಥಾನ ನೀಡುವುದರ
ಜೊತೆಗೆ ಕ್ಷೇತ್ರದ ಅಭಿವೃದಿಟಛಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಆಮಿಷವೊಡ್ಡಿದ್ದಾರೆ. ಜೊತೆಗೆ, ಸ್ಥಳೀಯ
ಬಿಜೆಪಿ ನಾಯಕರು, ಮುಖಂಡರು ಬೇರೆ ಬೇರೆ ರೀತಿಯಲ್ಲಿ ಆಮಿಷಗಳನ್ನು ಒಡ್ಡುತ್ತಿದ್ದಾರೆ. ನನ್ನಂತೆ ಹನೂರು ಶಾಸಕ ಆರ್‌.ನರೇಂದ್ರ, ಸಚಿವ ಸಿ.ಪುಟ್ಟರಂಗಶೆಟ್ಟಿ ಅವರನ್ನೂ ಬಿಜೆಪಿಗೆ ಆಹ್ವಾನಿಸಿದ್ದಾರೆ. ಆದರೆ, ಈ ವಿಷಯವಾಗಿ ಯಾವುದೇ ಮಠದ ಸ್ವಾಮೀಜಿ ಅಥವಾ ಶಾಸಕ ಶ್ರೀರಾಮುಲು ಅವರು ನಮ್ಮನ್ನು ಸಂಪರ್ಕಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next