Advertisement

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮಹದಾಯಿ ವಿವಾದ ಇತ್ಯರ್ಥ; ಶಾ

12:23 PM Feb 26, 2018 | Sharanya Alva |

ಕಲಬುರಗಿ: ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ವಿವಾದ ಬಗೆಹರಿಸಲು ಬಿಜೆಪಿ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತನ್ನಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.

Advertisement

ಸೋಮವಾರ ಕಲಬುರಗಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ ಹಾಳಾಗಿದೆ. ಸಿದ್ದರಾಮಯ್ಯ ಸರ್ಕಾರ, ಭ್ರಷ್ಟಾಚಾರ ಒಂದೇ ಆಗಿದೆ. ಜನ ಸಿದ್ದರಾಮಯ್ಯ ಸರ್ಕಾರ ಬದಲಿಸಲು ಚಿಂತಿಸಿದ್ದಾರೆ. ರಾಜ್ಯದ ಎಲ್ಲೆಡೆ ಬಿಜೆಪಿ ಪರ ಗಾಳಿ ಬೀಸತೊಡಗಿದೆ ಎಂದರು.

ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆಜೀ 5 ದಶಕಗಳ ಕಾಲ ರಾಜಕೀಯ ಮಾಡಿದ್ದ ಈ ಪ್ರದೇಶ ಹಿಂದುಳಿದಿದೆ ಎಂದು ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next