Advertisement

ಮಹದಾಯಿ ಸಮಸ್ಯೆಗೆ ಮಾತುಕತೆಯೇ ಪರಿಹಾರ

11:03 PM Dec 27, 2019 | Team Udayavani |

ಬೆಳಗಾವಿ: ಮಹದಾಯಿ ಹಾಗೂ ಕಳಸಾ-ಬಂಡೂರಿ ವಿಷಯದಲ್ಲಿ ನ್ಯಾಯಾಧಿಕರಣದ ಆದೇಶಕ್ಕೆ ಕಾನೂನು ತೊಡಕುಗಳು ಇರುವುದರಿಂದ ಕೇಂದ್ರ ಸರ್ಕಾರಕ್ಕೆ ಅಧಿಸೂಚನೆ ಹೊರಡಿಸಲು ಸಮಸ್ಯೆಯಾಗಿದೆ ಎಂದು ಬೆಳಗಾವಿ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

Advertisement

ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ನ್ಯಾಯಾಧಿಕರಣದ ತೀರ್ಪು ಪ್ರಶ್ನಿಸಿ ಕರ್ನಾಟಕ ಹಾಗೂ ಗೋವಾ ಸರ್ಕಾರಗಳೆರದೂ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿವೆ. ಈ ಕಾರಣದಿಂದ ಕೇಂದ್ರಕ್ಕೆ ಅಧಿಸೂಚನೆ ಪ್ರಕಟಿಸಲು ಬರುವುದಿಲ್ಲ. ಇಲ್ಲಿ ಕಾನೂನು ಅಡಚಣೆಗಳು ಇರುವುದರಿಂದ ಅದರ ಹೊರತಾಗಿ ಕರ್ನಾಟಕ ಹಾಗೂ ಗೋವಾ ಸರ್ಕಾರಗಳು ಪರಸ್ಪರ ಸೌಹಾರ್ದಯುತ ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಯತ್ನ ನಡೆಸಿದೆ. ಆದರೆ ಇದಕ್ಕೆ ಕಾಂಗ್ರೆಸ್‌ ಪಕ್ಷದಿಂದ ನಿರೀಕ್ಷಿತ ಸಹಕಾರ ಸಿಗುತ್ತಿಲ್ಲ. ಇಲ್ಲಿನ ಕಾಂಗ್ರೆಸ್‌ ನಾಯಕರು ಕಳಸಾ ಯೋಜನೆ ಜಾರಿಗೆ ಆಗ್ರಹಿಸಿದರೆ ಗೋವಾ ಕಾಂಗ್ರೆಸ್‌ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಕಾರಣ ಇದನ್ನು ಬಹಳ ಸೂಕ್ಷ್ಮವಾಗಿ ಬಗೆಹರಿಸಿಕೊಳ್ಳಬೇಕಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next