Advertisement

ಕ್ಷುಲ್ಲಕ ವಿಚಾರಕ್ಕೆ ಪತ್ನಿ ಜತೆ ಜಗಳ ತೆಗೆದು ಕೊಲೆಗೈದವನಿಗೆ ಜೀವಾವಧಿ ಶಿಕ್ಷೆ

02:55 PM Jul 06, 2023 | Team Udayavani |

ಮೈಸೂರು: ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಮೈಸೂರಿನ ಐದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೈಸೂರು ತಾಲೂಕಿನ ನಗರ್ತಹಳ್ಳಿ ಗ್ರಾಮದ ರಮೇಶ ನಾಯಕ ಶಿಕ್ಷೆಗೆ ಗುರಿಯಾದ ಅಪರಾಧಿ.

Advertisement

ಚಾಳಿ ಮುಂದುವರಿಸಿದ್ದ: ಈತ ತನ್ನ ಪತ್ನಿ ಕುಮಾರಿಯನ್ನು ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. ಕುಡಿತದ ಚಟಕ್ಕೆ ದಾಸನಾಗಿದ್ದ ರಮೇಶ ನಾಯಕ ನಿತ್ಯ ಪತ್ನಿ ಕುಮಾರಿಯೊಂದಿಗೆ ಗಲಾಟೆ ಮಾಡಿ ಹೊಡೆಯುವುದು, ಬಡಿಯುವುದು ಮಾಡುತ್ತಿದ್ದ. ಈ ಬಗ್ಗೆ ನೆರೆ ನಿವಾಸಿಗಳು ಸಾಕಷ್ಟು ಬುದ್ದಿವಾದ ಹೇಳಿದರೂ ಚಾಳಿ ಮುಂದುವರಿಸಿದ್ದ.

ದೋಷಾರೋಪ ಪಟ್ಟಿ ಸಲ್ಲಿಕೆ: ಕಳೆದ 2021 ಫೆ.25 ರಂದು ಮನೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿಕೊಂಡು ಕಬ್ಬಿಣದ ಅಲ್ಲೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಯಪುರ ಠಾಣೆ ಪೊಲೀಸರು ಆರೋಪಿ ಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾ ರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗುರುರಾಜ್‌ ಸೋಮಕ್ಕಲವರ್‌ ಅಪರಾಧಿಗೆ ಜೀವಾವಧಿ ಶಿಕ್ಷೆಯೊಂದಿಗೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಎಂ.ಎಸ್‌.ಮಂಜುಳಾ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next