Advertisement

Davangere: ಚಿಕನ್ ಮಾಡಿಲ್ಲ ಎಂಬ ಕಾರಣಕ್ಕೆ ಪತ್ನಿಯ ಕೊಲೆ ಮಾಡಿದ್ದವನಿಗೆ ಶಿಕ್ಷೆ ಪ್ರಕಟ

08:26 PM Dec 05, 2023 | Team Udayavani |

ದಾವಣಗೆರೆ: ಚಿಕನ್ ಮಾಡಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನ ಕೊಲೆ ಮಾಡಿದ್ದವನಿಗೆ ದಾವಣಗೆರೆಯ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 6 ವರ್ಷ ಜೈಲು, 10ಸಾವಿರ ರೂಪಾಯಿ ದಂಡ ವಿಧಿಸಿದೆ.

Advertisement

ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದ ಮಾಗನಹಳ್ಳಿ ಕೆಂಚಪ್ಪ ಶಿಕ್ಷೆಗೆ ಒಳಗಾದವನು.2022ರ ಜೂ. 8 ರ ಸಂಜೆ ಮದ್ಯಪಾನ ಮಾಡಿದ್ದ ಮಾಗನಹಳ್ಳಿ ಕೆಂಚಪ್ಪ ಚಿಕನ್ ಮಾಡಿಲ್ಲ ಎಂಬ ಕಾರಣಕ್ಕೆ ಪತ್ನಿ ಶೀಲಾಳ ಜೊತೆ ಜಗಳ ಪ್ರಾರಂಭಿಸಿ, ಒಂದು ಹಂತದಲ್ಲಿ ಚಾಕುವಿನಿಂದ ಎಡಭುಜಕ್ಕೆ ಹೊಡೆದು ಕೊಲೆ ಮಾಡಿದ್ದನು. ಶೀಲಾಳ ತಾಯಿ ಉಕ್ಕಡಗಾತ್ರಿ ಗುತ್ಯಮ್ಮ ಹರಿಹರ ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ವೃತ್ತ ನಿರೀಕ್ಷಕ ಯು. ಸತೀಶ್ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ವಿ. ವಿಜಯಾ ನಂದ ಅವರು ಹೆಂಡತಿಯನ್ನು ಕೊಲೆ ಮಾಡಿದ ಆರೋಪ ಸಾಬೀತಾಗಿದ್ದರಿಂದ 6 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿದರು. ಸರ್ಕಾರದ ಪರ ಸತೀಶ್ ಕುಮಾರ್ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next